ಪ್ರವೀಣ್ ಕೊಲೆ; ಸರಕಾರ ಎಚ್ಚೆತ್ತು ಕೊಳ್ಳಲಿಲ್ಲವೇಕೆ?: ಹೆಚ್ ಡಿಕೆ ಕಿಡಿ
ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ
Team Udayavani, Jul 27, 2022, 2:50 PM IST
ಬೆಂಗಳೂರು: ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಪ್ರವೀಣ್ ನೆಟ್ಟಾರು ಕೊಲೆ ಕುರಿತು ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಸರಣಿ ಟ್ವೀಟ್ ಮಾಡಿ, ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ? ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ?. ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ದೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು?. ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ ಎಂದು ಬರೆದಿದ್ದಾರೆ.
ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ. ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಟ್ವೀಟ್ ಗಳಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ