ಪೂರ್ವ ನಿಯೋಜಿತ ಹಳೆಹುಬ್ಬಳ್ಳಿ ಗಲಭೆ ತಪ್ಪಿಸಿದ್ದು ಪೊಲೀಸರು: ಕುಮಾರಸ್ವಾಮಿ


Team Udayavani, Apr 28, 2022, 6:51 PM IST

jds

ಹುಬ್ಬಳ್ಳಿ: ಹಳೆಹುಬ್ಬಳ್ಳಿ ಗಲಭೆ ಪ್ರಕರಣ ಇದೊಂದು ಪೂರ್ವ ನಿಯೋಜಿತವಾಗಿದ್ದು, ಇದನ್ನು ತಪ್ಪಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದು, ಅವರಿಗೆ ಅಭಿನಂದಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಗುರುವಾರ ಇಲ್ಲಿನ ಅಂಜುಮನ್ ಸಂಸ್ಥೆಯ ನೆಹರು ಕಾಲೇಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಸರಕಾರಕ್ಕೆ ಮುಜುಗರ ತರುವಂತಹದಾಗಿತ್ತು. ಆದರೆ ಪರಿಸ್ಥಿತಿ ಅರಿತ ಪೊಲೀಸರು ಸಕಾಲದಲ್ಲಿ ಗಲಭೆಯನ್ನು ಹತೋಟಿಗೆ ತಂದಿದ್ದಾರೆ. ಈ ಘಟನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ. ಅದನ್ನು ಪ್ರಾಮಾಣಿಕವಾಗಿ ಪತ್ತೆ ಹಚ್ಚುವ ಕೆಲಸ ಪೊಲೀಸರಿಂದ ಆಗಬೇಕು ಎಂದರು.

ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಅಮಾಯಕರು ನೋಡುತ್ತ ನಿಂತಿದ್ದರು. ಅಂತಹವರನ್ನು ಕೂಡ ಬಂಧಿಸಲಾಗಿದೆ. ಪೋಲೀಸರು ಬಂಧಿತರ ಹಿನ್ನೆಲೆ ನೋಡಬೇಕು. ಅವರ ಮೇಲೆ ಯಾವುದಾದರೂ ಕೇಸುಗಳು ಇದ್ದರೆ ಕ್ರಮ ಕೈಗೊಳ್ಳಲಿ. ಕಲ್ಲು ತೂರಾಟ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಕೇಸುಗಳು ಇರದಿದ್ದರೆ ಅವರನ್ನು ಬಿಟ್ಟು ಬಿಡಲಿ ಎಂದು ಪೊಲೀಸದ ಅಧಿಕಾರಿಗಳಲ್ಲಿ ಮನವಿ ಮಾಡುತ್ತೇನೆ ಎಂದರು.

ಹಲಾಲ್ ಹಾಗೂ ಹಿಜಾಬ್ ವಿಚಾರಗಳನ್ನು ಸರಕಾರ ಆರಂಭದಲ್ಲೆ ಚಿವುಟಿ ಹಾಕಬಹುದಿತ್ತು. ಅಂತಹ ಕೆಲಸ ಸರಕಾರದಿಂದ ಆಗಲಿಲ್ಲ. ಸರ್ವಜನಾಂಗದ ತೋಟಕ್ಕೆ ದಕ್ಕೆಯಾಗಬಾರದು. ಎಲ್ಲರೂ ಶಾಂತಿಯಿಂದ ಬದುಕಬೇಕು. ನಮ್ಮ ಪಕ್ಷ ಸಮಾಜಘಾತುಕ ಶಕ್ತಿಗಳಿಗೆ ಹಾಗೂ ಘಟನೆಗಳಿಗೆ ಅವಕಾಶ ಮಾಡಿಕೊಡುವುದಿಲ್ಲ. ಡಿಜೆ ಹಳ್ಳಿ ,‌ಕೆಜಿ ಹಳ್ಳಿ ಘಟನೆ ನಡೆಯಲು ಕಾರಣಿಭೂತರಾದವರು ಈಗಲೂ ಆರಾಮವಾಗಿ ಓಡಾಡುತ್ತಿದ್ದಾರೆ. ಅದು ಒಂದು ಪಕ್ಷದ ಮುಖಂಡರ ಜೊತೆಗೆ ಸುತ್ತಾಡುತ್ತಿದ್ದಾರೆ‌ ಎಂದರು.

ಪಿಎಸ್‌ಐ ಹಗರಣದ ರೂವಾರಿ ದಿವ್ಯಾ ಹಾಗರಗಿ ಬಂಧಿಸದ ವಿಚಾರದ ಕುರಿತು ಸರಕಾರವೇ ಉತ್ತರ ನೀಡಬೇಕು. ಅವರಿಗೆ ಸರಕಾರ ಅಥವಾ ರಾಜಕಾರಣದ ಕೃಪಾ ಕಟಾಕ್ಷ ಇದೆಯೋ ಇಲ್ಲವೋ ಗೊತ್ತಿಲ್ಲ. ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಯಾರ ಕಣ್ಣಿಗೆ ಸಿಗದೆ ಇರೋದು ಅವರೆಷ್ಟು ಶಕ್ತಿ ಶಾಲಿ ಎಂಬುವುದು ಗೊತ್ತಾಗುತ್ತದೆ ಎಂದರು.

ಹಿಂದಿ ಹೇರಿಕೆ ಸರಿಯಲ್ಲ

ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ಅದರದೆಯಾದ ಸ್ಥಾನ ಮಾನ, ಗೌರವ ಹಾಗೂ ಪ್ರಾತಿನಿಧ್ಯ ಇರುತ್ತದೆ. ಹಿಂದಿ ಹೇರಿಕೆ ಸರಿಯಲ್ಲ ಎಂದರು.

ಸಿನಿಮಾ ನಟರಿಗೆ ಯಾವುದೇ ಭಾಷೆಗಳಿಲ್ಲ. ನಟರು ಈ ವಿಚಾರಕ್ಕೆ ಹೋಗಬಾರದು. ಸಿನಿಮಾ ಅನ್ನೋದು ಅದೊಂದು ಭಾವನಾತ್ಮಕ ಸಂಬಂಧ ಇರುವ ಕ್ಷೇತ್ರ ಎಂದರು.

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.