ಸಂಪುಟ ವಿಸ್ತರಣೆ ಬೆನ್ನಲ್ಲೇ ಪುನಾರಚನೆಗೆ ಸಿದ್ಧತೆ


Team Udayavani, Feb 7, 2020, 3:07 AM IST

bjp-logo

ಬೆಂಗಳೂರು: ಸಾಕಷ್ಟು ರಾಜಕೀಯ ಮೇಲಾಟಗಳ ಬಳಿಕ ಅನರ್ಹರಾಗಿ ಉಪಚುನಾವಣೆ ಎದುರಿಸಿ ಅರ್ಹರಾದವರ ಪೈಕಿ 10 ಮಂದಿಗೆ ಸಚಿವ ಸ್ಥಾನ ನೀಡಿ “ಸಂತೃಪ್ತಿ’ ಪಡಿಸಿರುವ ಬೆನ್ನಿಗೇ ಹಾಲಿ 8-10 ಸಚಿವರನ್ನು ಕೈಬಿಟ್ಟು ಸಂಪುಟ ಪುನಾರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ.

ಸಂಪುಟದಲ್ಲಿ ಮೂಲ ಬಿಜೆಪಿಗರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಮಾತುಗಳ ಬೆನ್ನಲ್ಲೇ ಪಕ್ಷನಿಷ್ಠರಿಗೂ ಪ್ರಾತಿನಿಧ್ಯ ಕಲ್ಪಿಸಲು ಪಕ್ಷ ಚಿಂತನೆ ನಡೆಸಿದೆ. ರಾಜ್ಯ ಬಜೆಟ್‌ ಅಧಿವೇಶನದ ಬಳಿಕ ಇಲ್ಲವೇ ಜೂನ್‌ನಲ್ಲಿ ವಿಧಾನ ಪರಿಷತ್‌ನ 12 ಸ್ಥಾನ ತೆರವಾದ ಬಳಿಕ ಸಂಪುಟ ಪುನಾರಚನೆಗೆ ಮುಂದಾಗಲಿದೆ. ಮೊದಲ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಪಡೆದಿದ್ದ 17 ಮಂದಿ ಪೈಕಿ 8ರಿಂದ 10 ಮಂದಿಯನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸಿ ಮೂಲ ಬಿಜೆಪಿಯ ಸಚಿವಾಕಾಂಕ್ಷಿಗಳನ್ನು ಸಮಾಧಾನಪಡಿಸುವ ಯತ್ನಕ್ಕೆ ಕೈಹಾಕಲು ಮುಂದಾಗಿದೆ.

ಮುಂದಿನ ಜುಲೈಗೆ ಬಿಜೆಪಿ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಲಿದೆ. ಆಗಸ್ಟ್‌ ಅಂತ್ಯಕ್ಕೆ ಮೊದಲ ಸಂಪುಟ ವಿಸ್ತರಣೆ ವೇಳೆ ಸಚಿವರಾದವರ ಒಂದು ವರ್ಷದ ಅಧಿಕಾರಾವಧಿ ಪೂರ್ಣ ಗೊಳ್ಳ ಲಿದೆ. ಆಗ ಕೆಲವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡುವ ಚಿಂತನೆಯಿದೆ. ಆ ಹಿನ್ನೆಲೆಯಲ್ಲಿ ಸದ್ಯಕ್ಕೆ ಯಾರೊಬ್ಬರೂ ಬೇಸರಕ್ಕೆ ಒಳಗಾಗದೆ ಸಮಾಧಾನದಿಂದ ಇರಬೇಕು ಎಂಬ ಸಂದೇಶವನ್ನು ಹಿರಿಯ ನಾಯಕರು ರವಾನಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಕ್ರಿಯಾಶೀಲರಲ್ಲದ ಸಚಿವರಿಗೆ ಕೊಕ್‌: ಹಾಲಿ ಸಚಿವರ ಪೈಕಿ ತಮಗೆ ವಹಿಸಿದ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸದವರು, ಸರ್ಕಾರ ಹಾಗೂ ಪಕ್ಷದ ವರ್ಚಸ್ಸು ಹೆಚ್ಚಿಸುವ ರೀತಿಯಲ್ಲಿ ಕಾರ್ಯನಿರ್ವಹಿಸದವರು, ಸಂಘಟನೆ ಚಟುವಟಿಕೆಗಳಿಗೆ ಸ್ಪಂದಿಸದೆ ಅಂತರ ಕಾಯ್ದುಕೊಂಡವರು, ಅಧಿಕಾರವನ್ನಷ್ಟೇ ಅನುಭವಿಸುತ್ತ ತಮಗೆ ವಹಿಸಿದ ಜವಾಬ್ದಾರಿ ನಿರ್ಲಕ್ಷಿಸಿದ ಸಚಿವರಿಗೆ ಕೊಕ್‌ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಸದ್ಯಕ್ಕೆ ಹೊಸ ಸಚಿವರ ಬದಲಾವಣೆ ಇಲ್ಲ: ಎರಡನೇ ಸುತ್ತಿನಲ್ಲಿ ಸಂಪುಟ ಸೇರಿದ 10 ಮಂದಿಯನ್ನು ಪುನಾರಚನೆ ವೇಳೆ ಬದಲಾಯಿಸುವ ಸಾಧ್ಯತೆ ಬಹಳ ಕಡಿಮೆ. ಏಕೆಂದರೆ ಬೆರಳೆಣಿಕೆ ತಿಂಗಳ ಅವಧಿಯಲ್ಲಿ ಯಾವುದೇ ಸಚಿವರ ಕಾರ್ಯಕ್ಷಮತೆ ಅಳೆಯುವುದು ಸಾಧ್ಯ ವಿಲ್ಲ. ಉತ್ತಮವಾಗಿ ಕಾರ್ಯ ನಿರ್ವಹಣೆ ಮೂಲಕ ಪಕ್ಷ ಹಾಗೂ ಅವರ ವರ್ಚಸ್ಸು ಹೆಚ್ಚಿಸಿಕೊಳ್ಳುವವರಿಗೆ ತೊಂದರೆಯಾಗದು. ಮೊದಲ ಸುತ್ತಿನಲ್ಲಿ ಸಚಿವ ರಾದವರ ಪೈಕಿ ಕೆಲವರ ಬದಲಾವಣೆ ಅನಿವಾರ್ಯ. ಅವರನ್ನು ಸಂಘಟನೆ ಕಾರ್ಯದಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಹಿರಿಯ ನಾಯಕರೊಬ್ಬರು ಹೇಳಿದರು.

ಪಕ್ಷಕ್ಕೆ ದುಡಿದವರಿಗೆ ಆದ್ಯತೆ: ರಾಜ್ಯದಲ್ಲಿ ಬಿಜೆಪಿ ಎರಡನೇ ಬಾರಿಗೆ ಸರ್ಕಾರ ರಚಿಸಿದೆ. ಆದರೆ 4ರಿಂದ 6 ಬಾರಿ ಗೆದ್ದರೂ ಈವರೆಗೆ ಒಮ್ಮೆಯೂ ಸಚಿವರಾಗದವರು ಸಾಕಷ್ಟು ಮಂದಿ ಇದ್ದಾರೆ. ಅವರಿಗೆ ಅವಕಾಶ ನೀಡದಿದ್ದರೆ, ಅವರ ಸೇವೆ ಕಡೆಗಣಿಸಿದಂತಾಗುತ್ತದೆ. ಹೀಗಾಗಿ ಪುನಾರಚನೆಯಲ್ಲಿ ಪಕ್ಷ ನಿಷ್ಠರು, ಸಂಘಟನೆಗೆ ದುಡಿದವರಿಗೆ ಆದ್ಯತೆ ಮೇರೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಆ ಮೂಲಕ ಸಂಪುಟದಲ್ಲಿ ಸಮತೋಲನ ತರಲು ಪ್ರಯತ್ನಿಸಲಾಗುವುದು. ವರಿಷ್ಠರ ಸೂಚನೆಯಂತೆಯೇ ಈ ಪ್ರಕ್ರಿಯೆಯೂ ನಡೆಯಲಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.