ಪೀರಪಾಷಾ ಬಂಗಲೆಯಲ್ಲಿರುವ ಮಂಟಪ ಸಂರಕ್ಷಿಸಿ :ಸಿಎಂ ಭೇಟಿಯಾದ ಮಠಾಧೀಶರು
ಸ್ಥಳ ಸುಪರ್ದಿಗೆ ಪಡೆಯದಿದ್ದಲ್ಲಿ ''ಸ್ವಾಮೀಜಿಗಳ ನಡಿಗೆ ಅನುಭವ ಮಂಟಪದ ಕಡೆಗೆ''
Team Udayavani, Jun 5, 2022, 8:07 PM IST
ಬೆಂಗಳೂರು: ಬಸವಕಲ್ಯಾಣದಲ್ಲಿರುವ ಪೀರ್ ಪಾಷಾ ದರ್ಗಾದಲ್ಲಿರುವ ಮಂಟಪವನ್ನ ಸಂರಕ್ಷಣೆ ಮಾಡಬೇಕು ಎಂದು ವೀರಶೈವ ಲಿಂಗಾಯತ ಮಠಾಧೀಶರ ನಿಯೋಗ ಭಾನುವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಸಿಎಂ ರೇಸ್ ಕೋರ್ಸ್ ನ ಸರ್ಕಾರಿ ನಿವಾಸದಲ್ಲಿ ಭೇಟಿಯಾದ 20ಕ್ಕೂ ಹೆಚ್ಚು ಮಠಾಧೀಶರ ನಿಯೋಗ, ಕುರುಹು ಪತ್ತೆಯಾದ ಜಾಗ ಸುಪರ್ದಿಗೆ ಪಡೆದು ಸಂರಕ್ಷಣೆ ಮಾಡಲು ಒತ್ತಾಯಿಸಿದ್ದಾರೆ. ಆ ಸ್ಥಳ ಸುಪರ್ದಿಗೆ ಪಡೆಯದಿದ್ದಲ್ಲಿ ಸ್ವಾಮೀಜಿಗಳ ನಡಿಗೆ ಅನುಭವ ಮಂಟಪದ ಕಡೆಗೆ ಹೆಸರಿನಲ್ಲಿ ಬೃಹತ್ ಪಾದಯಾತ್ರೆ ನಡೆಸುವುದಾಗಿ ಸ್ವಾಮೀಜಿಗಳು ತಿಳಿಸಿದ್ದಾರೆ.
ಸಿಎಂ ಭೇಟಿ ಬಳಿಕ ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಮಾತನಾಡಿ, ಸಿಎಂ ಭೇಟಿಯಾಗಿ ಬಸವಕಲ್ಯಾಣ ಮಂಟದ ಬಗ್ಗೆ ಮಾಹಿತಿ ನೀಡಿದ್ದೇವೆ. ಮೂಲ ಅನುಭವದ ಮಂಟಪ ಇರುವ ಬಗ್ಗೆಯೂ ದಾಖಲೆ ಕೊಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸಂಪೂರ್ಣವಾಗಿ ಸಮಾಲೋಚನೆ ಮಾಡಲಿದ್ದಾರೆ ಎಂದರು.
ಜೂನ್ 12ಕ್ಕೆ ಪಾದಯಾತ್ರೆ ಮಾಡುವ ವಿಚಾರದ ಕುರಿತು, ಈ ಬಗ್ಗೆ ನಾಳೆ ನಡೆಯುವ ಚಿಂತನ ಮಂಥನ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ.ಪುರಾತತ್ವ ಇಲಾಖೆ ಜೊತೆಗೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಪುರಾತತ್ವ ಇಲಾಖೆ ಬಳಿ ವರದಿ ತರಿಸಿಕೊಂಡು ಮುಂದಿನ ತೀರ್ಮಾನ ಮಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…