ಕೊಡಗಿನ ಹೆಡ್‌ಕಾನ್‌ಸ್ಟೇಬಲ್‌ ಎಂ.ಬಿ.ಸುಮತಿಗೆ ರಾಷ್ಟ್ರಪತಿ ಪದಕದ ಗರಿ


Team Udayavani, Jan 8, 2021, 11:15 PM IST

ಕೊಡಗಿನ ಹೆಡ್‌ಕಾನ್‌ಸ್ಟೇಬಲ್‌ ಎಂ.ಬಿ.ಸುಮತಿಗೆ ರಾಷ್ಟ್ರಪತಿ ಪದಕದ ಗರಿ

ಮಡಿಕೇರಿ: ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕ ಸೇವೆಗಾಗಿ ಪೊಲೀಸ್‌ ಇಲಾಖೆ ಅಧಿಕಾರಿಗಳು ಮತ್ತು ಸಿಬಂದಿಗೆ ನೀಡಲಾಗುವ ಪ್ರತಿಷ್ಠಿತ ರಾಷ್ಟ್ರಪತಿ ಪದಕಕ್ಕೆ ಕೊಡಗು ಜಿಲ್ಲಾ ಮಹಿಳಾ ಪೊಲೀಸ್‌ ಹೆಡ್‌ಕಾನ್‌ಸ್ಟೇಬಲ್‌ ಎಂ.ಬಿ. ಸುಮತಿ ಅವರು ಭಾಜನರಾಗಿದ್ದಾರೆ.

ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸ್‌ ಸಿಬ್ಬಂದಿಯೊಬ್ಬರಿಗೆ ರಾಷ್ಟ್ರಪತಿ ಪದಕ ದೊರೆಯುತ್ತಿರುವುದು ಮತ್ತೂಂದು ವಿಶೇಷವಾಗಿದೆ. 1999ರಲ್ಲಿ ಎಎಸ್‌ಐ ಆಗಿ ನಿವೃತ್ತರಾದ ಅಚ್ಚುತ್ತ ನಾಯರ್‌ ಅವರಿಗೆ ರಾಷ್ಟ್ರಪತಿ ಪದಕ ದೊರೆತಿತ್ತು. ಸುದೀರ್ಘ‌ ವರ್ಷಗಳ ಬಳಿಕ ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆಗೆ ರಾಷ್ಟ್ರಪತಿ ಪದಕ ದೊರೆತ್ತಿರುವುದು ಕೊಡಗು ಜಿಲ್ಲೆಗೆ ಹೆಮ್ಮೆ ಮೂಡಿಸಿದೆ.

ಜ.7ರಂದು ಬೆಂಗಳೂರಿನ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ರಾಜ್ಯಪಾಲರಾದ ವಾಜುಬಾಯಿ ವಾಲ ಅವರು ಮಡಿಕೇರಿ ಮಹಿಳಾ ಮತ್ತು ಮಕ್ಕಳ ಪೊಲೀಸ್‌ ಠಾಣೆಯ ಸಿಬ್ಬಂದಿ ಎಂ.ಬಿ ಸುಮತಿ ಅವರಿಗೆ ರಾಷ್ಟ್ರಪತಿ ಪದಕ ಪ್ರದಾನ ಮಾಡಿ ಗೌರವಿಸಿದರು. ಈ ಪ್ರತಿಷ್ಟಿತ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿ ನೀಡಬೇಕಿತ್ತಾದರೂ ಕೋವಿಡ್ ಹಿನ್ನಲೆಯಲ್ಲಿ ಬೆಂಗಳೂರಿನ ರಾಜ ಭವನದಲ್ಲಿ ನೀಡಲಾಗಿದೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

ಸುಮತಿ ಸೇವೆ :

ಕೊಡಗು ಜಿಲ್ಲಾ ಮಹಿಳಾ ಪೊಲೀಸ್‌ ಘಟಕದಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಎಂ.ಬಿ.ಸುಮತಿ 1996ರ ಜುಲೈ 1ರಂದು ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆಗೆ ಭರ್ತಿಯಾಗಿದ್ದರು. ಬಳಿಕ ಧಾರವಾಡದಲ್ಲಿ ಪೊಲೀಸ್‌ ತರಬೇತಿ ಪೂರೈಸಿ ಮೊಟ್ಟ ಮೊದಲ ಬಾರಿಗೆ ಸೋಮವಾರಪೇಟೆ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದರು. ಬಳಿಕ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆ, ಲಾಟರಿ ಮತ್ತು ಅಬಕಾರಿ ಪೊಲೀಸ್‌ ಘಟಕ, ಮಹಿಳಾ ಠಾಣೆ, ಮತ್ತು ಜಿಲ್ಲಾ ಅಪರಾಧ ಪತ್ತೆ ದಳದಲ್ಲೂ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಂ.ಬಿ ಸುನಿತ ಮಕ್ಕಳ ಮತ್ತು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕಳೆದ 3 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳಾ ದೌರ್ಜನ್ಯ, ಅತ್ಯಾಚಾರ ಪ್ರಕರಣ, ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದ ತನಿಖೆ ಹಾಗೂ ಕಾನೂನುಗಳ ಬಗ್ಗೆ ಎಂ.ಬಿ ಸುಮಿತ ಅವರು ವಿಶೇಷ ಪರಿಣಿತಿಯನ್ನೂ ಹೊಂದಿದ್ದಾರೆ. ಎಂ.ಬಿ. ಸುಮಿತ ಅವರ ಸಹೋದರ ಎಂ.ಬಿ ಗಣೇಶ್‌ ಕೂಡ 25 ವರ್ಷಗಳಿಂದ ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆ ಸಿಬ್ಬಂದಿಯಾಗಿದ್ದು, ಪ್ರಸ್ತುತ ವಿರಾಜಪೇಟೆ ಅರಣ್ಯ ಸಿಐಡಿ ಸಂಚಾರಿ ಪೊಲೀಸ್‌ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.