ರಾಷ್ಟ್ರಪತಿ ಪೊಲೀಸ್‌ ಪದಕ


Team Udayavani, Jan 26, 2021, 2:51 AM IST

Untitled-5

ಕೊಡಗಿನ ಜಿತೇಂದ್ರ ರೈ :

ಮಡಿಕೇರಿ : ಕೊಡಗು ಜಿಲ್ಲಾ ಪೊಲೀಸ್‌ ಇಲಾಖೆ ಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿತೇಂದ್ರ ರೈ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.ಕೊಡಗು ಜಿಲ್ಲಾ ಶ್ವಾನದಳ ಹಾಗೂ ಬಾಂಬ್‌ ನಿಷ್ಕ್ರಿಯ ದಳದಲ್ಲಿ ಜಿತೇಂದ್ರ ಅವರು ಸಲ್ಲಿಸಿದ ಉತ್ತಮ ಸೇವೆಗಾಗಿ ಪ್ರಶಸ್ತಿ ಲಭಿಸಿದೆ. ಪ್ರಸ್ತುತ ಇವರು ಬಾಂಬ್‌ ನಿಷ್ಕ್ರಿಯ ದಳದಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಉಡುಪಿಯ ಎಎಸ್‌ಐ ಪ್ರಕಾಶ್‌ :

ಉಡುಪಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯ ಕ್ರೈಂ ರೆಕಾರ್ಡ್‌ ಬ್ಯೂರೋದಲ್ಲಿ ಕಾರ್ಯನಿರ್ವಹಿಸು ತ್ತಿರುವ ಅಸಿಸ್ಟೆಂಟ್‌ ಸಬ್‌ ಇನ್‌ಸ್ಪೆಕ್ಟರ್‌ ಪ್ರಕಾಶ್‌ ಅವರು ರಾಷ್ಟ್ರಪತಿ ಪೊಲೀಸ್‌ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಬಿಕಾಂ ಪದವೀಧರರಾದ ಅವರು 1993ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಪೊಲೀಸ್‌ ಇಲಾಖೆಗೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅಪರಾಧ ಚಟುವಟಿಕೆಗಳ ದಾಖಲೀಕರಣ, ಅಪಘಾತ ಹಾಗೂ ಆತ್ಮಹತ್ಯೆ ಪ್ರಕರಣ ಸ್ಪಷ್ಟವಾಗಿ ದಾಖಲಿಸುತ್ತಿದ್ದರು. ಇತ್ತೀಚೆಗೆ ನಡೆದ ಚುನಾವಣೆ ಸಂದರ್ಭದಲ್ಲಿಯೂ ಉತ್ತಮವಾಗಿ ಕಾರ್ಯನಿರ್ವಹಿಸಿ ಪ್ರಶಂಸೆಗೆ ಪಾತ್ರರಾಗಿದ್ದರು.ಇವಿಷ್ಟೇ ಅಲ್ಲದೆ ಪೊಲೀಸ್‌ ಇಲಾಖೆಯ ವಿವಿಧ ಕಾರ್ಯಾಚರಣೆಗಳಲ್ಲಿ ಭಾಗವಹಿಸಿ ಅಪರಾಧಿಗಳನ್ನು ಮಟ್ಟಹಾಕುವಲ್ಲಿ ಯಶಸ್ವಿಯಾಗಿದ್ದರು. ಗಂಗೊಳ್ಳಿ, ಬ್ರಹ್ಮಾವರ, ಮಣಿಪಾಲ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಹಲವಾರು ಪ್ರಕರಣಗಳನ್ನು ಭೇದಿಸುವಲ್ಲಿ ಸಹಕರಿಸಿದ್ದರು.

ಕೆಎಸ್‌ಆರ್‌ಪಿಯ ಪ್ರಕಾಶ್‌ ಶೆಟ್ಟಿ :

ಉಳ್ಳಾಲ: ಅಸೈಗೋಳಿಯಲ್ಲಿರುವ ಕರ್ನಾಟಕ ಪೊಲೀಸ್‌ಮೀಸಲು ಪಡೆಯ 7ನೇ ಪಡೆಯ ಹೆಡ್‌ಕಾನ್‌ಸ್ಟೆಬಲ್‌ ಪ್ರಕಾಶ್‌ ಶೆಟ್ಟಿ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮೂಲತಃ ಬಜಾಲ್‌ ಕಲ್ಲಗುಡ್ಡೆ ನಿವಾಸಿಯಾಗಿರುವ ಪ್ರಕಾಶ್‌ ಶೆಟ್ಟಿ 1993ರಲ್ಲಿ ಶಿವಮೊಗ್ಗ ಜಿಲ್ಲೆಯ ಮಾಚನಹಳ್ಳಿಯಲ್ಲಿರುವ ಕರ್ನಾಟಕ ಮೀಸಲು ಪಡೆಯ 8ನೇ ಪಡೆಗೆ ಕಾನ್‌ಸ್ಟೆಬಲ್‌ ಆಗಿ ಸೇವೆ ಆರಂಭಿಸಿದರು. 1996ರಲ್ಲಿ ಮಂಗಳೂರಿನ ಅಸೈಗೋಳಿಯಲ್ಲಿರುವ ಕೆಎಸ್‌ಆರ್‌ಪಿಯ 7ನೇ ಪಡೆಗೆ ವರ್ಗಾವಣೆಗೊಂಡಿದ್ದರು.  28 ವರ್ಷಗಳ ಕಾಲ ಇಲಾಖೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪದಕ ಲಭಿಸಿದೆ.

ಮೂಡುಬಿದಿರೆಯ ಅಗ್ನಿಶಾಮಕ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ :

ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಅಗ್ನಿಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರವೀಣ್‌  ಮತ್ತು ಪ್ರಮುಖ ಅಗ್ನಿಶಾಮಕರಾಗಿ ಸೇವೆ ಸಲ್ಲಿಸುತ್ತಿರುವ ಯೋಗೀಶ್‌ ಪಿ. ಬಂಗೇರ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಪ್ರವೀಣ್‌ 38 ವರ್ಷಗಳಿಂದ, ಯೋಗೀಶ್‌ ಬಂಗೇರ ಅವರು 28 ವರ್ಷಗಳಿಂದ ರಾಜ್ಯದ ಹಲವು ಕಡೆಗಳಲ್ಲಿ  ಅಗ್ನಿಶಾಮಕ ದಳದಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.