ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ: ಜೈಶಂಕರ್
Team Udayavani, Aug 13, 2022, 2:58 PM IST
ಬೆಂಗಳೂರು: 40 ವರ್ಷಗಳ ಹಿಂದೆ ನಾನು ವಿದೇಶಾಂಗ ಸೇವೆಗೆ ಸೇರಿಕೊಂಡಾಗ ಜಾಗತಿಕ ಮಟ್ಟದಲ್ಲಿ ಭಾರತದ ದನಿಯೇ ಇರಲಿಲ್ಲ. ಆದರೆ ಪ್ರಧಾನಿ ಮೋದಿಯವರ ದಕ್ಷ ನಾಯಕತ್ವದಿಂದಾಗಿ ಈಗ ನಮ್ಮ ದನಿಗೆ ಅಭೂತಪೂರ್ವ ಬೆಲೆ ಬಂದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದರು.
ರಾಮನಗರದ ಜೈನ್ ವಿವಿ ಆವರಣದಲ್ಲಿ ಶನಿವಾರ ನಡೆದ ಹರ್ ಘರ್ ತಿರಂಗಾ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ವಿದೇಶಾಂಗ ನೀತಿಯು ದೇಶದ ಜನರ ದಿನನಿತ್ಯದ ಬದುಕಿನ ಮೇಲೆ ಅಪಾರ ಪರಿಣಾಮ ಬೀರುತ್ತದೆ. ಇದರಲ್ಲಿ ಭಾರತೀಯರ ಹಿತಾಸಕ್ತಿ, ರಾಷ್ಟ್ರೀಯ ಅಭಿವೃದ್ಧಿ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆ ನಾವು ತಾಳುವ ನಿಲುವು ನಿರ್ಣಾಯಕ ಪಾತ್ರ ವಹಿಸುತ್ತವೆ. ಎಂಟು ವರ್ಷಗಳಿಂದ ಈಚೆಗೆ ನಮ್ಮ ಯೋಗ, ಆಹಾರ, ಅಧ್ಯಾತ್ಮ, ಸಂಸ್ಕೃತಿ ಹಾಗೂ ಪರಂಪರೆಗಳಿಗೆ ವಿಶ್ವ ಮಟ್ಟದಲ್ಲಿ ಅಪಾರ ಗೌರವ ಪ್ರಾಪ್ತಿಯಾಗಿದೆ ಎಂದು ಅವರು ಹೇಳಿದರು.
ಮೋದಿ ಅವರ ನಾಯಕತ್ವವು ಜಗತ್ತಿಗೆ ಗೊತ್ತಾಗಿದೆ. ಕಳೆದ ಎಂಟು ವರ್ಷಗಳಲ್ಲಿ ಜಗತ್ತಿನ ನಾನಾ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 70 ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಲಾಗಿದೆ. ಹಾಗೆಯೇ ವಿದೇಶಗಳಲ್ಲಿ ಓದುತ್ತಿರುವ 12 ಲಕ್ಷ ಭಾರತೀಯ ವಿದ್ಯಾರ್ಥಿಗಳ ಹಿತರಕ್ಷಣೆ ಮಾಡುವುದು ಸಾಧ್ಯವಾಗಿದೆ ಎಂದು ಅವರು ವಿವರಿಸಿದರು.
ಪರಸ್ಪರ ಬೆಸೆದುಕೊಂಡಿರುವ ಜಗತ್ತಿನಲ್ಲಿ ವಿದೇಶಾಂಗ ಸಚಿವರು ದೇಶದ ಹೂಡಿಕೆ, ತಂತ್ರಜ್ಞಾನ, ಮಧುರ ಬಾಂಧವ್ಯ, ಸಹಭಾಗಿತ್ವ, ಸಹಕಾರ ಇತ್ಯಾದಿಗಳನ್ನು ಗಮನಕ್ಕೆ ತೆಗೆದುಕೊಂಡು ಹೆಜ್ಜೆ ಇಡಬೇಕಾದ್ದು ಬಹಳ ಮುಖ್ಯ. ಉಕ್ರೇನ್-ರಷ್ಯಾ ಯುದ್ಧದ ಸಮಯದಲ್ಲಿ ನಾವು ಕಡಿಮೆ ಬೆಲೆಗೆ ತೈಲೋತ್ಪನ್ನಗಳನ್ನು ಪಡೆದು ಕೊಂಡಿರುವುದು ಇದಕ್ಕೆ ಸೂಕ್ತ ನಿದರ್ಶನವಾಗಿದೆ ಎಂದು ಜೈಶಂಕರ್ ನುಡಿದರು.
ಭಾರತದ ವಿದೇಶಾಂಗ ನೀತಿಯು ಹಿಂದೆ ರಕ್ಷಣಾತ್ಮಕವಾಗಿತ್ತು. ಈಗ ತೀಕ್ಣವಾಗಿದ್ದು, ಕೊರೋನಾ ಕಾಲದಲ್ಲಿ ನಮ್ಮ ಶಕ್ತಿ ಸಾಮರ್ಥ್ಯ ಕಂಡು ದೊಡ್ಡ ದೇಶಗಳು ಕೂಡ ಬೆರಗಾಗಿವೆ ಎಂದು ಅವರು ಬಣ್ಣಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ 19 ಸೋಂಕು, ಐಸೋಲೇಶನ್
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ, ರಾಮನಗರ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಂಗವಾಗಿ 50 ಸಾವಿರ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ ಎಂದರು.
ಮೋದಿ ಅವರ ನಾಯಕತ್ವದಡಿ ರಾಜ್ಯದಲ್ಲಿ ಎನ್ಇಪಿ ಜಾರಿಯಾಗುತ್ತಿದೆ. ಗುಣಮಟ್ಟದ ಶಿಕ್ಷಣ ನಮ್ಮಲ್ಲಿ ಇದ್ದು, ಉಚಿತವಾಗಿ ಅತ್ಯುತ್ತಮ ಕೋರ್ಸುಗಳನ್ನು ಕಡ್ಡಾಯವಾಗಿ ಕಲಿಸಲಾಗುತ್ತಿದೆ ಎಂದು ಅವರು ಹೇಳಿದರು.
ಜೈಶಂಕರ್ ಅವರಂತಹ ಪ್ರತಿಭಾವಂತರು ವಿದೇಶಾಂಗ ಸಚಿವರಾಗಿರುವುದು ದೇಶದ ಸುದೈವವಾಗಿದೆ. ಇಂತಹ ಸಮರ್ಥರಿಂದ ಭಾರತದ ದಿಕ್ಕುದೆಸೆಯೇ ಬದಲಾಗುತ್ತಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಎಸ್ಪಿ ಸಂತೋಷ್ ಬಾಬು, ಎಂ ಎಲ್ ಸಿ ದೇವೇಗೌಡ, ಜೈನ್ ವಿವಿ ಸ್ಥಾಪಕ ಚೆನ್ ರಾಜ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ