ಶಿಕ್ಷಕರಿಗೂ ಇನ್ನು ಮನೆಗೆಲಸ ; ಜು.31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ
Team Udayavani, Jul 17, 2020, 6:44 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕೋವಿಡ್ 19 ಸೋಂಕು ತೀವ್ರವಾಗಿರುವುದರಿಂದ ಮುಂಜಾಗ್ರತೆಯ ಕ್ರಮವಾಗಿ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿ ಜು.31ರ ವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಎಸೆಸೆಲ್ಸಿ ಮೌಲ್ಯಮಾಪನಕ್ಕೆ ಮತ್ತು ಕೋವಿಡ್ 19 ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬಂದಿ ಹೊರತು ಪಡಿಸಿ ಉಳಿದ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಈ ಬಗ್ಗೆ ಸುತ್ತೋಲೆಯಲ್ಲಿ ಇಲಾಖೆ ತಿಳಿಸಿದೆ.
ಈ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಲಾಗುವುದು. ಶಿಕ್ಷಕರು ಮತ್ತು ಸಿಬಂದಿ ವರ್ಗದವರನ್ನು ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಲು ಅವರ ದೂರವಾಣಿ ಮತ್ತು ಇ-ಮೇಲ್ ವಿಳಾಸವನ್ನು ಪಡೆದುಕೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಮತ್ತು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ.
ಆರೋಗ್ಯ ಸೇತು ಆ್ಯಪ್ ಅಳವಡಿಸಿ
ಎಲ್ಲ ಶಿಕ್ಷಕರು ಮತ್ತು ಬೋಧಕೇತರ ವರ್ಗ ತಮ್ಮ ಮೊಬೈಲ್ಗಳಲ್ಲಿ ಆರೋಗ್ಯ ಸೇತು ಆ್ಯಪ್ ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ
ಈ ಅವಧಿಯಲ್ಲಿ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗುವಂತಿಲ್ಲ. ಅಲ್ಲದೆ ಸೇವೆ ಅಗತ್ಯಬಿದ್ದಾಗ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಪಾಲನೆ ಮಾಡಿ ಕೆಲಸಕ್ಕೆ ಹಾಜರಾಗುವಂತೆ ಇಲಾಖೆ ತಿಳಿಸಿದೆ.
ಆನ್ಲೈನ್ ತರಗತಿಗಳನ್ನು ನಡೆಸಿದಲ್ಲಿ ಶಿಕ್ಷಕರು ಮನೆಯಿಂದಲೇ ಭಾಗವಹಿಸಬೇಕು. ಇಲಾಖೆಗೂ ಆನ್ಲೈನ್ ತರಗತಿ ನಡೆಸುವ ಆಲೋಚನೆ ಇದ್ದು, ಅಂತಹ ಸಂದರ್ಭದಲ್ಲಿ ಕರ್ತವ್ಯಗಳನ್ನು ಪಾಲಿಸಬೇಕು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ