ಪರಿಹಾರ ವಿತರಣೆ ಅಕ್ರಮದ ವಿರುದ್ಧ ತನಿಖೆ


Team Udayavani, Dec 15, 2018, 7:20 AM IST

67.jpg

ವಿಧಾನಸಭೆ: ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಯಡಿ ರೈತರಿಗೆ ಪರಿಹಾರ ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿ ತಿಂಗಳಲ್ಲಿ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕೃಷಿ 
ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ಹೇಳಿದರು. ಬೆಳೆ ವಿಮೆಯಡಿ ರೈತರಿಗೆ ವಿಮಾ ಕಂಪೆನಿಗಳು ಪರಿಹಾರ ನೀಡುತ್ತಿಲ್ಲ ಎಂದು
ಸದಸ್ಯರು ಪಕ್ಷಾತೀತವಾಗಿ ಆರೋಪಿಸಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರ ಸೂಚನೆಯಂತೆ ಸಚಿವರು ಕ್ರಮ ಕೈಗೊಳ್ಳುವ ಭರವಸೆ
ನೀಡಿದರು.

ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಕೆ.ಎಂ.ಶಿವಲಿಂಗೇಗೌಡ ಪ್ರಸ್ತಾಪಿಸಿದ ವಿಚಾರದ ಬಗ್ಗೆ ವಿಸ್ತ್ರತ ಚರ್ಚೆ ನಡೆಯಿತು. ಶಿವಲಿಂಗೇಗೌಡ ಮಾತನಾಡಿ, ಅರಸೀಕೆರೆ ಕ್ಷೇತ್ರದ ವ್ಯಾಪ್ತಿಯ ಗ್ರಾಮ ಪಂಚಾಯ್ತಿ ಪೈಕಿ ಮಾಡಾಳು, ಲಾಳನಕೆರೆ, ಬಾಗೀವಾಳು,
ಪುರಲೇಹಳ್ಳಿ, ಬೆಳಗುಂಬ ಗ್ರಾಪಂ ವ್ಯಾಪ್ತಿಯ ರೈತರಿಗೆ 2017-18ನೇ ಸಾಲಿನ ಬೆಳೆ ವಿಮಾ ಪರಿಹಾರ ವಿತರಿಸದೆ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿದರು. ಕ್ಷೇತ್ರದ 32 ಗ್ರಾಪಂಗೆ ವಿಮಾ ಕಂಪೆನಿ ಪ್ರತಿನಿಧಿಗಳು ಕಟಾವು ಸಮೀಕ್ಷೆಗೆ ಭೇಟಿ ನೀಡಿದಾಗ ನಾನು ಅವರೊಂದಿಗೆ ತೆರಳಿ ಪರಿಶೀಲನೆ ನಡೆಸಿದ ಹಿನ್ನೆಲೆಯಲ್ಲಿ ಅಷ್ಟೂ ಪಂಚಾಯ್ತಿ ರೈತರಿಗೆ ಉತ್ತಮ ವಿಮಾ ಮೊತ್ತ ಸಿಕ್ಕಿದೆ. ಆದರೆ ನಾನು ಪರಿಶೀಲನೆ ವೇಳೆ ಹಾಜರಿರದ ಐದು ಪಂಚಾಯ್ತಿ ರೈತರಿಗೆ ವಿಮಾ ಪರಿಹಾರ ನೀಡಿಲ್ಲ. ಅಷ್ಟು ಪಂಚಾಯ್ತಿಗೆ
ಮಾತ್ರ ಮಳೆ ಸುರಿಯಿತೆ? ಎಲ್ಲಿಂದ ನೀರು ಹರಿಯಿತು ಎಂದು ಪ್ರಶ್ನಿಸಿದರು. 

ಕೆಲ ವಿಮಾ ಕಂಪೆನಿಗಳು ರೈತರಿಗೆ ಮೋಸ ಮಾಡಲು ಬಂದಿರುವ ಢಾಕುಗಳು ಎಂದರೆ ತಪ್ಪಾಗಲಾರದು. ಗ್ರಾಮ ಲೆಕ್ಕಿಗರು, ಕಂಪೆನಿ ಪ್ರತಿನಿಧಿಗಳು, ಕೆಲ ಅಧಿಕಾರಿಗಳು ಶಾಮೀಲಾಗಿ ವಂಚಿಸುತ್ತಿದ್ದಾರೆ. ಈ ವಿಮಾ ಕಂಪೆನಿಗಳು ರೈತರನ್ನು ಸಾಕಷ್ಟು 
ವಂಚಿಸುತ್ತಿವೆ. ನನ್ನ ಆರೋಪದಲ್ಲಿ ಸುಳ್ಳಿದ್ದರೆ ಸದನ ಶಿಕ್ಷೆ ನೀಡಲಿ. ಆರೋಪದಲ್ಲಿ ಸತ್ಯವಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ. ಕೇಂದ್ರ ಸರ್ಕಾರದೊಂದಿಗೆ ಜಂಟಿಯಾಗಿ ಫ‌ಸಲ್‌ ಬಿಮಾ ಯೋಜನೆ ಜಾರಿಗೊಳಿಸುವ ಬದಲಿಗೆ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಆಗ ಸಚಿವ ಶಿವಶಂಕರರೆಡ್ಡಿ, ಈ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. 

ಇದಕ್ಕೆ ಸಮಾಧಾನಗೊಳ್ಳದ ಬಿಜೆಪಿಯ ಆರಗ ಜ್ಞಾನೇಂದ್ರ, ಬಹಳಷ್ಟು ಮಂದಿ ವಿಮಾ ಕಂತುಗಳನ್ನು ಪಾವತಿಸಿದ್ದು, ಕೆಲವರಿಗಷ್ಟೇ ಪರಿಹಾರ ಮೊತ್ತ ಸಿಕ್ಕಿದೆ. ಇಲಾಖೆ ಕೆಲ ಅಧಿಕಾರಿಗಳು ಹಾಗೂ ಕೆಲ ವಿಮಾ ಕಂಪೆನಿ ಏಜೆಂಟರು ಶಾಮೀಲಾಗಿ ಮೋಸ
ಮಾಡುತ್ತಿದ್ದಾರೆ. ಹೀಗೆ ಮುಂದುವರಿದರೆ ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆಯ ಬಗ್ಗೆ ವಿಶ್ವಾಸವೇ ಇಲ್ಲದಂತಾಗುತ್ತದೆ ಎಂದು ಹೇಳಿದರು. ಜೆಡಿಎಸ್‌ನ ಸಿ.ಎನ್‌.ಬಾಲಕೃಷ್ಣ, ಹಾಸನದಲ್ಲೂ ಇದೇ ರೀತಿ ನಡೆ ದಿದ್ದು, ರೈತರಿಗೆ ತೊಂದರೆಯಾಗಿದೆ. ವಿಮಾ ಕಂಪೆನಿ ಗಳು ಲಾಭ ಪಡೆಯುತ್ತಿವೆ ಎಂದು ದೂರಿದರು. 

ಕೊನೆಗೆ ಮಾತನಾಡಿದ ಸಭಾಧ್ಯಕ್ಷ ರಮೇಶ್‌ ಕುಮಾರ್‌, ಎಲ್ಲ ವಿಮಾ ಕಂಪೆನಿಗಳು ವಂಚಿಸುತ್ತವೆ ಎಂದು ಹೇಳುವುದಿಲ್ಲ. ರೈತರಿಗೆ ಅನ್ಯಾಯವಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕೂಡಲೇ ಈ ಬಗ್ಗೆ ತನಿಖೆ ನಡೆಸಬೇಕು. ತಿಂಗಳಲ್ಲಿ ವರದಿ ಪಡೆದು ಅಕ್ರಮದಲ್ಲಿ ಶಾಮೀಲಾಗಿರುವವರನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಕೆಲವರಾದರೂ ಶಿಕ್ಷೆಗೆ ಗುರಿಯಾಗಿ ಜಾಮೀನಿಗೆ
ನಿಲ್ಲುವಂತಾಗಲಿ ಎಂದು ಸಲಹೆ ನೀಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ತನಿಖೆ ನಡೆಸಿ ತಿಂಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಂಗನ ಕಾಯಿಲೆ ನಿಯಂತ್ರಣಕ್ಕೆ ಮನವಿ
ಸೊರಬ, ತೀರ್ಥಹಳ್ಳಿ, ಸಾಗರ ಸೇರಿ ಶಿವಮೊಗ್ಗ ಭಾಗದಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಬಿಜೆಪಿಯ ಆರಗ ಜ್ಞಾನೇಂದ್ರ, ಹಾಲಪ್ಪ ಆಗ್ರಹಿಸಿದರು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ
ಅವರು, ಮಂಗನ ಕಾಯಿಲೆಯಿಂದ ಜನರ ಸಾವು ಪ್ರಕರಣಗಳು ಸಂಭವಿಸುತ್ತಿದೆ. ಸರ್ಕಾರ ತಕ್ಷಣ ವಿಷಯ ಗಂಭೀರವಾಗಿ ಪರಿಗಣಿಸ ಬೇಕೆಂದು ಒತ್ತಾಯಿಸಿದರು. ಆರೋಗ್ಯ ಸಚಿವರು ಅನುಮತಿ ಪಡೆದು ಗೈರು ಹಾಜರಾಗಿದ್ದು, ಸೋಮವಾರ ಉತ್ತರ ಕೊಡಿಸುವುದಾಗಿ ಸೀ³ಕರ್‌ ರಮೇಶ್‌ಕುಮಾರ್‌ ಭರವಸೆ ನೀಡಿದರು.

ರಾಜ್ಯದಲ್ಲಿ ಭೀಕರ ಬರ ಕಾಣಿಸಿಕೊಂಡಿದೆ. ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆಯಡಿ ರೈತರಿಗೆ ಪ್ರಯೋಜನವಾಗಬೇಕು. ಕೆಲ ವಿಮಾ ಕಂಪೆನಿಗಳು ವಂಚಿಸುತ್ತಿದ್ದು, ಅನ್ಯಾಯವಾಗದಂತೆ ಎಚ್ಚರ ವಹಿಸಬೇಕು. ಕೂಡಲೇ ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರು ಬೀದಿಗಿಳಿಯುತ್ತಾರೆ.
 ●ಬಿ.ಎಸ್‌.ಯಡಿಯೂರಪ್ಪ, ಪ್ರತಿಪಕ್ಷ ನಾಯಕ 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.