ಸೆ.2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ

ಬೃಹತ್‌ ಸಮಾವೇಶ ದಲ್ಲಿ ಮಾತನಾಡುವ ಸಾಧ್ಯತೆ

Team Udayavani, Aug 22, 2022, 6:26 PM IST

PM Modi

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆ. 2ರಂದು ಮಂಗಳೂರಿಗೆ ಆಗಮಿಸಲಿದ್ದು ನವಮಂಗಳೂರು ಬಂದರು ಪ್ರಾಧಿಕಾರಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಪ್ರಧಾನಿಯವರ ಕಾರ್ಯಕ್ರಮದ ಕುರಿತು ಅಧಿಕೃತ ಪ್ರಕಟನೆ ಎರಡು ದಿನಗಳೊಳಗೆ ಪ್ರಕಟವಾಗುವ ಸಾಧ್ಯತೆ ಇದೆ.

ನವಮಂಗಳೂರು ಬಂದರಿನಲ್ಲಿ ಪೂರ್ಣಗೊಂಡಿರುವ ಅನಘಾ ರಿಫೈನರಿ, ಬರ್ತ್‌ ನಂ.14 ಸೇರಿದಂತೆ 6 ಯೋಜನೆಗಳನ್ನು ಪ್ರಧಾನಿ ಲೋಕಾರ್ಪಣೆಗೊಳಿಸುವರು. ಸಾಗರಮಾಲಾ ಯೋಜನೆಯ ಕೆಲವು ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸುವರು.

ಬೃಹತ್‌ ಸಮಾವೇಶಕ್ಕೆ ಸಿದ್ಧತೆ
ಬಳಿಕ ನಡೆಯುವ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ಪಾಲ್ಗೊಳ್ಳುವರು. ಸಮಾವೇಶ ಕೂಳೂರಿನ ಗೋಲ್ಡ್‌ಫಿಂಚ್‌ ಮೈದಾನ ದಲ್ಲಿ ನಡೆಯುವ ಸಂಭವವಿದ್ದು, ಸುಮಾರು 5 ಲಕ್ಷ ಮಂದಿ ಸೇರುವ ಸಾಧ್ಯತೆ ಇದೆ.

ಪ್ರಧಾನಿ ಭೇಟಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ದೃಢಪಡಿಸಿದ್ದು ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಸೆ. 2ರಂದು ಕೊಚ್ಚಿಯಲ್ಲೂ ಪ್ರಧಾನಿ ಯವರ ಕಾರ್ಯಕ್ರಮ ನಿಗದಿಯಾಗಿದೆ. ಕೊಚ್ಚಿನ್‌ ಶಿಪ್‌ಯಾರ್ಡ್‌ನಲ್ಲಿ ದೇಶದ ಪ್ರಥಮ ಸ್ವದೇಶಿ ನಿರ್ಮಿತ ಐಎನ್‌ಎಸ್‌ ವಿಕ್ರಾಂತ್‌ ಯುದ್ಧವಿಮಾನ ವಾಹಕ ನೌಕೆಯನ್ನು ಬೆಳಗ್ಗೆ ಲೋಕಾರ್ಪಣೆ ಮಾಡುವರು. ಮಧ್ಯಾಹ್ನದ ಬಳಿಕ ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ಹೊಸದಿಲ್ಲಿಗೆ ತೆರಳುವ ಸಾಧ್ಯತೆ ಇದೆ.

ಪ್ರಧಾನಿ ಲಾಲ್‌ಬಹದ್ದೂರ್‌ ಶಾಸ್ತ್ರಿ ಅವರು ನವ ಮಂಗಳೂರು ಬಂದರಿನ ಶಿಲಾನ್ಯಾಸ ನೆರವೇರಿಸಿ ದ್ದರು. ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ 1975ರಂದು ನವಮಂಗಳೂರು ಬಂದರನ್ನು ಉದ್ಘಾಟಿಸಿದ್ದರು. ಈಗ ನರೇಂದ್ರ ಮೋದಿಯವರು ನವಮಂಗ ಳೂರಿಗೆ ಭೇಟಿ ನೀಡುವ ಮೂರನೇ ಪ್ರಧಾನಿಯಾಗಲಿದ್ದಾರೆ.

ಕರಾವಳಿಯಲ್ಲಿ ಮೋದಿಯವರ ಮೊದಲ ಸರಕಾರಿ ಕಾರ್ಯಕ್ರಮ
ಮೋದಿ ಪ್ರಧಾನಿಯಾಗಿ ಅವಿ ಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. 2017ರ ಅ.29ರಂದು ಉಜಿರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶ ದಲ್ಲಿ ಭಾಗವಹಿಸಿದ್ದರು. 2021ರ ಜ. 5ರಂದು ಮಂಗಳೂರಿನಲ್ಲಿ ನಿಗದಿಯಾಗಿದ್ದ ಕೊಚ್ಚಿನ್‌- ಮಂಗಳೂರು ಅನಿಲ ಕೊಳವೆ ಮಾರ್ಗ ಯೋಜನೆಯನ್ನು ದಿಲ್ಲಿಯಿಂ ದಲೇ ವೀಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿದ್ದರು. 2016 ರಲ್ಲಿ ಕೇರಳದ ಕೊಚ್ಚಿಗೆ ತೆರಳುವ ಹಾದಿಯಲ್ಲಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದು ಕಾರ್ಯಕರ್ತರನ್ನು ಭೇಟಿ ಯಾಗಿದ್ದರು. 2017ರ ಡಿ.18 ರಂದು ಲಕ್ಷದ್ವೀಪಕ್ಕೆ ತೆರಳುವ ಹಾದಿಯಲ್ಲಿ ಮಂಗಳೂರಿನ ಸರ್ಕ್ನೂಟ್‌ ಹೌಸ್‌ನಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದರು. 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಪ್ರಚಾರಕ್ಕೆ ಆಗಮಿಸಿ ಮಂಗಳೂರಿಗೆ ಆಗಮಿಸಿ ನೆಹರೂ ಮೈದಾನಿನಲ್ಲಿ ಮಾತನಾಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.