ಸ್ವಪಕ್ಷದವರ ಸಿಎಂ ಕುರ್ಚಿ ಕಿತ್ತಾಟಕ್ಕೆ ಪ್ರಿಯಾಂಕ್ ಖರ್ಗೆ ಬೇಸರ
Team Udayavani, Jul 25, 2022, 4:22 PM IST
ಬೆಂಗಳೂರು: ‘ಮಾತು ಮನೆ ಕೆಡಿಸ್ತು, ತೂತು ಒಲೆ ಕೆಡಿಸ್ತು’ ಎಂಬ ಗಾದೆ ಮಾತಿನ ಮೂಲಕ ಪಕ್ಷದ ನಾಯಕರ ಹೇಳಿಕರ ಬಗ್ಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ವ ಪಕ್ಷದ ನಾಯಕರ ಸಿಎಂ ಗಾದಿ ಕಿತ್ತಾಟದ ಬಗ್ಗೆ ಅಸಮಾಧಾನ ಹೊರ ಹಾಕಿದರು.
ಪಕ್ಷವನ್ನ ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಬಹುಮತ ಬಂದಾಗ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಬೇಕು. ಆ ಬಳಿಕ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಿಎಲ್ಪಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಪಕ್ಷದಲ್ಲಿ ಗೌರವ ಸ್ಥಾನ ಸಿಗಲಿದೆ. ಈಗಲೇ ಸಿಎಂ ವಿಚಾರವಾಗಿ ಮಾತನಾಡುವುದು ಸರಿಯಲ್ಲ ಎಂದರು.
ಇದನ್ನೂ ಓದಿ:ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿದ್ದಕ್ಕೆ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿದ ಪೋಷಕರು
ತನ್ನ ಅಭಿಪ್ರಾಯದಿಂದ ಬೇರೆಯವರಿಗೆ ನೋವಾಗಬಾರದು ಎನ್ನುವುದನ್ನು ಅರಿತು ಕೊಳ್ಳಬೇಕು. ತಮ್ಮ ಅಭಿಪ್ರಾಯವನ್ನು ಎಲ್ಲಿ ವ್ಯಕ್ತಪಡಿಸಬೇಕೋ ಅಲ್ಲಿ ಹೇಳಬೇಕು. ಹೈಕಮಾಂಡ್, ಸಿಎಲ್ಪಿ ಸಭೆಯಲ್ಲಿ ವ್ಯಕ್ತಪಡಿಸಲಿ. ಅಭಿಪ್ರಾಯ ವ್ಯಕ್ತಪಡಿಸಲು ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ ಸಾರ್ವಜನಿಕವಾಗಿ ಅಭಿಪ್ರಾಯ ಹೊರ ಹಾಕಬಾರದು ಎಂದರು.
ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಅವಕಾಶವಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್, ಗೋವಿಂದ ಕಾರಜೋಳರನ್ನು ಡಿಸಿಎಂ ಸ್ಥಾನದಿಂದ ಇಳಿಸಿದರು. ಎಂಎಲ್ಸಿ ಕೈಯಲ್ಲಿ ಚಡ್ಡಿ ಹೊರಿಸಿದ್ದಾರೆ ಎಂದು ಆರೋಪಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ