ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆಗೆ ಕೋವಿಡ್ ಸೋಂಕು ದೃಢ
Team Udayavani, Jan 15, 2022, 7:22 PM IST
ವಾಡಿ: ಚಿತ್ತಾಪುರ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪರೀಕ್ಷೆಯಲ್ಲಿ ಒಮ್ಮೆ ಸುಳ್ಳು ಪಾಸಿಟಿವ್ ವರದಿ ಬಂದರೆ, ಮತ್ತೊಮ್ಮೆ ನಿಜಕ್ಕೂ ಸೊಂಕು ದೃಢಪಟ್ಟಿರುವ ಪಾಸಿಟಿವ್ ವರದಿ ಬಂದಿದೆ. ಹಾಗಂತ ಆಶ್ಚರ್ಯಕರ ಸಂದೇಶವೊಂದು ಸ್ವತಃ ಪ್ರಿಯಾಂಕ್ ಖರ್ಗೆಯವರೇ ಶನಿವಾರ ಟ್ವೀಟ್ ಮಾಡಿದ್ದಾರೆ.
ಮಹಾಮಾರಿ ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಕೋವಿಡ್ ಸೋಂಕಿತರ ಸಂಪರ್ಕಿತನಾಗಿ ಸ್ವಯಂ ಹೋಂ ಕ್ವಾರಂಟೈನ್ ಆಗುವ ಮೂಲಕ ನಾನು ಸೋಂಕಿನಿಂದ ಪಾರಾಗಿದ್ದೆ. ವಿಚಿತ್ರವೆಂದರೆ ಒಮ್ಮೆ ನನಗೆ ಸುಳ್ಳು ಪಾಸಿಟಿವ್ ವರದಿ ಕೂಡ ಬಂದಿತ್ತು. ಜತೆಗೆ ಹಲವಾರು ಬಾರಿ ಪರೀಕ್ಷೆ ಮಾಡಿಸಿದ್ದಾಗಲೂ ನನಗೆ ನೆಗೆಟೀವ್ ವರದಿ ಬಂದಿತ್ತು. ಆದರೆ ಇದೀಗ ನನಗೆ ಕೊರೊನಾ ಮೂರನೇ ಅಲೆಯಲ್ಲಿ ಪಾಸಿಟಿವ್ ವರದಿ ದೃಢಪಟ್ಟಿದೆ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುವ ಮೂಲಕ ಪ್ರಿಯಾಂಕ್ ಸ್ಪಷ್ಟಪಡಿಸಿದ್ದಾರೆ.
ನನ್ನ ಸಂಪರ್ಕದಲ್ಲಿರುವ ಅಧಿಕಾರಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಅದೃಷ್ಠವಶಾತ್ ಅವರೆಲ್ಲರಿಗೂ ನೆಗೆಟಿವ್ ವರದಿ ಬಂದಿರುತ್ತದೆ. ಕಾರಣ ಈ ಮಧ್ಯೆ ನನ್ನ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಕೊರೊನಾ ಪರೀಕ್ಷೆಗೊಳಗಾಗುವ ಮೂಲಕ ಆರೋಗ್ಯ ಸುರಕ್ಷತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿರುವ ಶಾಸಕ ಖರ್ಗೆ, ಬೆಂಗಳೂರಿನ ಸದಾಶಿವ ನಗರದ ತಮ್ಮ ಮನೆಯಲ್ಲಿ ಹೋಂ ಐಸೋಲೇಷನ್ ಚಿಕಿತ್ಸೆ ಪಡೆಯುತ್ತಿರುವುದಾಗಿ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!