ಅತಿಹೆಚ್ಚು ಚೆಕ್ ಡ್ಯಾಂ ನಿರ್ಮಿಸಿದರೆ ಇನಾಮು
Team Udayavani, Jan 25, 2019, 12:55 AM IST
ಬೆಂಗಳೂರು: ಅತಿ ಹೆಚ್ಚು ಚೆಕ್ ಡ್ಯಾಂ ನಿರ್ಮಿಸುವ ರಾಜ್ಯದ 60 ಗ್ರಾಮ ಪಂಚಾಯ್ತಿಗಳಿಗೆ ಜಲಸಂಪನ್ಮೂಲ ಇಲಾಖೆ ವತಿಯಿಂದ ತಲಾ 1 ಕೋಟಿ ರೂ.ಬಹುಮಾನ ರೂಪವಾಗಿ ನೀಡಲಾಗುವುದು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದ ಕೃಷಿ ವಿವಿಯಲ್ಲಿ ಹಮ್ಮಿಕೊಂಡಿದ್ದ ನೀರಿನ ಸಂರಕ್ಷಣೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿ, ಅಂತರ್ಜಲ ಸಂರಕ್ಷಣೆ ಬಗ್ಗೆ ಸರ್ಕಾರ ಹಲವು ಯೋಜನೆ ಗಳನ್ನು ರೂಪಿಸಿದ್ದು, ಚೆಕ್ ಡ್ಯಾಂ ನಿರ್ಮಾಣ ಪ್ರೋತ್ಸಾಹಿ ಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 60 ಕೋಟಿ ರೂ.ಮೀಸಲಿಟ್ಟಿದೆ. ಅತಿ ಹೆಚ್ಚು ಚೆಕ್ ಡ್ಯಾಂ ನಿರ್ಮಾಣ ಮಾಡುವ ಜಿÇ್ಲೆಯ ಎರಡು ಗ್ರಾಪಂಗಳಿಗೆ ತಲಾ ಒಂದು ಕೋಟಿ ರೂ. ಬಹುಮಾನವಾಗಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಮಹದಾಯಿ, ಕೃಷ್ಣ, ಕಾವೇರಿ ಸೇರಿದಂತೆ ಹಲವು ನದಿ ನೀರಿನ ಹಂಚಿಕೆ ವಿಚಾರದಲ್ಲಿ ಅಂತರಾಜ್ಯ ಕಲಹ ಶುರು ವಾಗಿದೆ. ಅಂತರ್ಜಲ ಸಂರಕ್ಷಣೆಗೆ ಒತ್ತು ಕೊಟ್ಟರೆ ಇಂತಹ ಪರಿಸ್ಥಿತಿ ಉದ್ಭವಿಸುವುದಿಲ್ಲ. ರೈತರ ಬದುಕು ಹಸನು ಮಾಡುವ ನಿಟ್ಟಿನಲ್ಲಿ ಜಲಸಂಪನ್ಮೂಲ ಇಲಾಖೆ 75 ಸಾವಿರ ಕೋಟಿ ರೂ. ಮುಡುಪಾಗಿಟ್ಟಿದೆ ಎಂದು ಹೇಳಿದರು.
ಕೀಲಿ ಕೈ ಕೇಂದ್ರದಲ್ಲಿದೆ: ಈ ಹಿಂದೆ ನದಿ ನೀರು ಬಳಕೆಯ ಕೀಲಿ ಕೈ ರಾಜ್ಯಗಳ ಕೈಯಲ್ಲಿತ್ತು. ಆದರೆ ಈಗ ಆ ಕೀಲಿ ಕೈ ಕೇಂದ್ರ ಸರ್ಕಾರ ಸುಪರ್ದಿಗೆ ಸೇರಿದೆ. ಆ ಹಿನ್ನೆಲೆಯಲ್ಲಿ ನೀರು ಬಿಡುವುದು ಮತ್ತು ಬಳಕೆ ಕುರಿತು ಕೇಂದ್ರ ಸರ್ಕಾರವೇ ನಿರ್ಧರಿಸಲಿದೆ. ಕೆಲವು ಭಾಗಗಳಲ್ಲಿ ನದಿ ನೀರಿಗೆ ಅಕ್ರಮವಾಗಿ ಪಂಪ್ ಸೆಟ್ಗಳನ್ನು ಅಳವಡಿಸಿಕೊಳ್ಳುತ್ತಿರುವುದರಿಂದ ಕೊನೆ ಹಂತದ ರೈತರಿಗೆ ನೀರು ಸಿಗುತ್ತಿಲ್ಲ. ಈ ಸಂಬಂಧ ಸಮಿತಿಯೊಂದನ್ನು ರಚಿಸಲಾಗುವುದು ಎಂದು ತಿಳಿಸಿದರು.
ಕೋಲಾರದ ಜನ ಮಾದರಿ: ನೀರಿಲ್ಲದಿದ್ದರೂ, ಹನಿ ನೀರಾವರಿ ಮೂಲಕ ತೋಟಗಾರಿಕೆ ಬೆಳೆ, ಬೆಳೆದು ಕೋಲಾರ ಜನತೆ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಆ ಜಿಲ್ಲೆಯ ಜನರನ್ನೇ ಇತರ ಜಿಲ್ಲೆಯ ಜನರು ಅನುಸರಿಬೇಕು. ನೀರಿನ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇಂಗು ಗುಂಡಿ ಮತ್ತು ಚೆಕ್ ಡ್ಯಾಂ ನಿರ್ಮಾಣಕ್ಕೆ ರೈತರು ಮುಂದಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು