ಪಾಕ್ ಪರ ಘೋಷಣೆ; ನ್ಯಾಯಾಂಗ ಬಂಧನ ವಿಸ್ತರಣೆ
Team Udayavani, Mar 3, 2020, 3:06 AM IST
ಹುಬ್ಬಳ್ಳಿ: ಪಾಕಿಸ್ತಾನ ಪರ ಹೇಳಿಕೆ ನೀಡಿ ಬಂಧಿತರಾದ ಕಾಶ್ಮೀರ ಮೂಲದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸ್ಥಳೀಯ 2ನೇ ಜೆಎಂಎಫ್ ನ್ಯಾಯಾಲಯ ಮಾ.13ರವರೆಗೆ ವಿಸ್ತರಿಸಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳಾದ ಜಮ್ಮು-ಕಾಶ್ಮೀರ ಮೂಲದ ಬಸೀತ ಆಶೀಕ್ ಆಸೀಕ್ ಹುಸೇನ್ ಸೋಫಿ, ತಾಲೀಬಮಜೀದ್ ಅಬ್ದುಲಮಜೀದ್ ವಾನಿ, ಅಮೀರಮೊಹೀದ್ದಿನ್ ಗುಲಾಮಮೊಹೀದ್ದಿನ್ ವಾನಿ ದೇಶದ್ರೋಹ ಪ್ರಕರಣದಡಿ ಬಂಧಿತರಾಗಿದ್ದರು.
ಗ್ರಾಮೀಣ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಮೂವರನ್ನು ಮೂರು ದಿನ ವಶಕ್ಕೆ ಪಡೆದಿದ್ದು, ಬಂಧಿತರು ಮಾ.7ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ಪ್ರಕರಣದ ತನಿಖೆಗಾಗಿ ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಪೊಲೀಸರು ಕೋರ್ಟ್ಗೆ ಮನವಿ ಮಾಡಿದ್ದರು. 2ನೇ ಜೆಎಂಎಫ್ಸಿ ನ್ಯಾಯಾಧೀಶ ವಿಶ್ವನಾಥ ಮೂಗತಿ ಅವರು ವಿಡಿಯೋ ಕಾನ್ರೆನ್ಸ್ ಮೂಲಕ ಬಂಧಿತರನ್ನು ವಿಚಾರಣೆಗೊಳಪಡಿಸಿ, ನಂತರ ನ್ಯಾಯಾಂಗ ಬಂಧನದ ಅವಧಿಯನ್ನು ಮಾ.13ರವರೆಗೆ ವಿಸ್ತರಿಸಿದರು ಎಂದು ತಿಳಿದುಬಂದಿದೆ.
ತಕರಾರು ಅರ್ಜಿ ಸಲ್ಲಿಕೆಗೆ ಅವಕಾಶ: ಜಾಮೀನು ಅರ್ಜಿ ಕುರಿತು ತಕರಾರು ಅರ್ಜಿ ಸಲ್ಲಿಸಲು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ.5ರವರೆಗೆ ಕಾಲಾವಕಾಶ ನೀಡಿದೆ. ಬಂಧಿತರಿಗೆ ಜಾಮೀನು ಮಂಜೂರು ಮಾಡುವಂತೆ ಕೋರಿ ಬಂಧಿತರ ಪರ ವಕೀಲರು ಶುಕ್ರವಾರ ಧಾರವಾಡ ಜಿಲ್ಲಾ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಸ್ಥಳೀಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಿಗೆ ನೋಟಿಸ್ ಪಡೆಯುವಂತೆ ನಿರ್ದೇಶಿಸಿದ್ದರು. ಸೋಮವಾರ ನಡೆದ ಈ ಅರ್ಜಿ ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕಿ ಸುಮಿತ್ರಾ ಅವರು ಕಾಲಾವಕಾಶ ಕೋರಿದ್ದು, ಮಾ.5 ರೊಳಗೆ ತಕರಾರು ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…