ಎನ್ಇಪಿ ಜಾರಿಯಿಂದ ಸಮಸ್ಯೆ: ವಿಶ್ರಾಂತ ಕುಲಪತಿಗಳ ವೇದಿಕೆ ಆರೋಪ
Team Udayavani, Oct 30, 2022, 6:35 AM IST
ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಇಲಾಖೆಯು ದೇಶದಲ್ಲೇ ಮೊದಲ ರಾಜ್ಯವಾಗಿ “ರಾಷ್ಟ್ರೀಯ ಶಿಕ್ಷಣ ನೀತಿ-2020′ ಅನ್ನು ತರಾತುರಿ ಯಲ್ಲಿ ಜಾರಿಗೊಳಿಸಿದ ಪರಿಣಾಮ ವಿದ್ಯಾರ್ಥಿಗಳ ನೋಂದಣಿ, ಕೋರ್ಸ್ಗಳ ಆಯ್ಕೆ, ಎನ್ಇಪಿ ಬಗ್ಗೆ ಉಪನ್ಯಾಸಕರಿಗೆ ಅಗತ್ಯ ಜ್ಞಾನವಿಲ್ಲದೆ ಸಾಕಷ್ಟು ಸಮಸ್ಯೆಯಾಗಿದೆ ಎಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಗಂಭೀರ ಆರೋಪ ಮಾಡಿದೆ.
ಈ ಸಂಬಂಧ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಡಾ| ಕೆ.ಎಸ್.ರಂಗಪ್ಪ, ಪ್ರಖರವಾಗಿ ಎನ್ಇಪಿ ಅನುಷ್ಠಾನಗೊಳಿಸಲು ಬಹುಮುಖ್ಯವಾಗಿ ಪ್ರಾಧ್ಯಾಪಕರಿಗೆ ತರಬೇತಿ ನೀಡಬೇಕಿದೆ. ಆದರೆ ಸಾಂಕೇತಿಕವಾಗಿ ತರಬೇತಿ ನೀಡಿರುವುದರಿಂದ ಪ್ರಾಧ್ಯಾಪಕರಿಗೆ ಪೂರ್ಣ ಪ್ರಮಾಣದಲ್ಲಿ ಎನ್ಇಪಿ ಅರ್ಥವಾಗದ ಪರಿಣಾಮ ತಾಂತ್ರಿಕವಾಗಿ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದರು.
ಪದವಿ ಕಾಲೇಜುಗಳಲ್ಲಿ ಬಹುತೇಕ ಅತಿಥಿ ಉಪನ್ಯಾಸಕರೇ ಇರುವುದರಿಂದ ಅವರಿಗೆ ಎನ್ಇಪಿ ಬಗ್ಗೆ ತರಬೇತಿ ನೀಡಬೇಕಿದೆ. ತರಬೇತಿ ನೀಡಲು ವಿಶ್ರಾಂತ ಕುಲಪತಿಗಳ ವೇದಿಕೆ ಸಿದ್ಧವಿದೆ. ಆರಂಭಿಕ ಹಂತವಾಗಿ ಮೈಸೂರು ವಿಶ್ವವಿದ್ಯಾನಿಲಯದ 12 ಕಾಲೇಜುಗಳಲ್ಲಿ ತರಬೇತಿ ನೀಡಿದ್ದೇವೆ. ಕರಾವಳಿ, ಕಲಬುರಗಿ ಮತ್ತು ಧಾರವಾಡ ವಿಭಾಗಗಳಲ್ಲಿಯೂ ತರಬೇತಿ ನೀಡಬೇಕಿದೆ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್