ಪ್ರಾಧ್ಯಾಪಕ ಪರೀಕ್ಷೆ ಅಕ್ರಮ: ಇಬ್ಬರ ಸೆರೆ
ವ್ಯಾಟ್ಸ್ಆ್ಯಪ್ನಲ್ಲಿ ಪ್ರಶ್ನೆ ಕಳುಹಿಸಿದ್ದ ಉಪನ್ಯಾಸಕಿ
Team Udayavani, Apr 26, 2022, 7:00 AM IST
ಬೆಂಗಳೂರು: ಮತ್ತೊಂದು ಸರಕಾರಿ ಹುದ್ದೆಯ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ರಾಜ್ಯ ಸರಕಾರಿ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮೈಸೂರು ಮೂಲದ ಅತಿಥಿ ಉಪನ್ಯಾಸಕಿ ಸೌಮ್ಯಾ (32) ಹಾಗೂ ಬೆಂಗಳೂರು ಮೂಲದ ಓರ್ವನನ್ನು ಮಲ್ಲೇಶ್ವರ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಪರೀಕ್ಷೆ ನಡೆಸಿತ್ತು. ಆಗ ಮೈಸೂರು ವಿವಿಯ ಕಾಲೇಜೊಂದರಲ್ಲಿ ಭೂಗೋಳಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕಿ ಸೌಮ್ಯಾ, ಪರೀಕ್ಷೆ ನಡೆಯುವ ಒಂದು ಗಂಟೆ ಮೊದಲು ತನ್ನ ವಾಟ್ಸ್ಆ್ಯಪ್ನಿಂದ ಭೂಗೋಳಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ 18 ಪ್ರಶ್ನೆಗಳನ್ನು ಪರೀಕ್ಷಾರ್ಥಿಯೊಬ್ಬರಿಗೆ ಕಳುಹಿಸಿದ್ದರು. ಅವರು ಇತರ ಕೆಲವರಿಗೂ ಹಂಚಿದ್ದರಿಂದ ಅದು ಸೋರಿಕೆಯಾಗಿತ್ತು. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿ ಕಾರದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು, ಅಭ್ಯರ್ಥಿಗಳ ದೂರು ಆಧರಿಸಿ ಸೌಮ್ಯಾ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ರವಿವಾರ ಸೌಮ್ಯಾಳನ್ನು ಬಂಧಿಸಲಾಗಿದೆ.
ಪಿಎಚ್ಡಿ ಪದವೀಧರೆ
ಸೌಮ್ಯಾ ಮೈಸೂರು ವಿಶ್ವವಿದ್ಯಾನಿಲಯದ ಎಂಎಸ್ಸಿ ಪದವೀಧರೆ. ಅದೇ ವಿವಿಯಲ್ಲಿ “ಜಿಐಎಸ್ ಆ್ಯಂಡ್ ಅಗ್ರಿಕಲ್ಚರ್ ಜಿಯೋಗ್ರಫಿ’ ವಿಷಯದಲ್ಲಿ ಪಿಎಚ್ಡಿ ಪದವಿಯನ್ನೂ ಪಡೆದು ಗಂಗೋತ್ರಿಯಲ್ಲಿ ಅತಿಥಿ ಉಪನ್ಯಾಸಕರಾಗಿದ್ದರು. ಇತ್ತೀಚೆಗೆ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ಗೆ ಆಯ್ಕೆಯಾಗಿದ್ದ ಕಾರಣ ಅತಿಥಿ ಉಪನ್ಯಾಸಕ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ