ಪ್ರಾಧ್ಯಾಪಕರ ಪದವಿ: ಮಾಹಿತಿಗೆ ಮುಂದಾದ ತಾಂತ್ರಿಕ ಶಿಕ್ಷಣ ಇಲಾಖೆ
Team Udayavani, Jan 23, 2020, 3:05 AM IST
ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೋಧಕರು ತಾಂತ್ರಿಕ ಕೋರ್ಸ್ಗಳ ಶಿಕ್ಷಣವನ್ನು ಯಾವ ವಿಶ್ವವಿದ್ಯಾಲಯಗಳಲ್ಲಿ ಪಡೆದಿದ್ದಾರೆ ಎಂಬ ಮಾಹಿತಿ ಕಲೆ ಹಾಕಲು ತೀರ್ಮಾನಿಸಲಾಗಿದೆ. ನಕಲಿ ಪದವಿ ಪಡೆದು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವವರ ವಿರುದ್ಧ ನ್ಯಾಯಾಲಯದ ಆದೇಶದಂತೆ ಕ್ರಮ ತೆಗೆದುಕೊಳ್ಳಲು ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.
ಸರ್ಕಾರ ಅಥವಾ ನಿರ್ದಿಷ್ಟ ಪ್ರಾಧಿಕಾರಗಳ ಅನುಮತಿ ಪಡೆಯದ ಮುಕ್ತ ವಿಶ್ವವಿದ್ಯಾಲಯ ಅಥವಾ ದೂರ ಶಿಕ್ಷಣ ಸಂಸ್ಥೆಗಳ ಮೂಲಕ ಎಂಜಿನಿಯರಿಂಗ್ ಅಥವಾ ಡಿಪ್ಲೋಮಾ ಪದವಿಗಳನ್ನು ಪಡೆದಿರುವ ಸಾಧ್ಯತೆ ಇದೆ. ಮಾನ್ಯತೆ ಇಲ್ಲದ ಮುಕ್ತ ವಿವಿಗಳಲ್ಲಿ ವಿವಿಧ ಪದವಿ ಪಡೆದು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಪ್ರಾಧ್ಯಾಪಕರ ವೃಂದದಲ್ಲಿ ಆಯ್ಕೆ ಹೊಂದಿ, ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಬಂದಿದೆ.
ಅಂತಹ ಪ್ರಾಧ್ಯಾಪಕರು ಹೊಂದಿರುವ ಪದವಿ ಹಾಗೂ ಸಂಸ್ಥೆಯ ವಿವರವನ್ನು ಇಲಾಖೆಗೆ ಸಲ್ಲಿಸಬೇಕು. ಸೂಕ್ತ ಪ್ರಾಧಿಕಾರಗಳಿಂದ ಅನುಮತಿ ಪಡೆಯದ ಸಂಸ್ಥೆಗಳಿಂದ ಪದವಿ ಪಡೆದು ಆಯ್ಕೆ ಹೊಂದಿದ ಪ್ರಾಧ್ಯಾಪಕರ ಕುರಿತು ನ್ಯಾಯಾಲಯದ ಸ್ಪಷ್ಟ ನಿರ್ದೇಶನವಿದ್ದಲ್ಲಿ, ಅಂತಹ ಮಾಹಿತಿಯನ್ನು ಜ.27ರೊಳಗೆ ಸಲ್ಲಿಸಬೇಕು ಎಂದು ಸರ್ಕಾರಿ ಹಾಗೂ ಅನುದಾನಿತ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರಿಗೆ ಇಲಾಖೆ ನಿರ್ದೇಶಿಸಿದೆ.
ಆಯಾ ಸಂಸ್ಥೆಯ ಪ್ರಾಂಶುಪಾಲರು ಈ ಸಂಬಂಧ ಪ್ರಾಧ್ಯಾಪಕರ ಮಾಹಿತಿಯನ್ನು ಅಪ್ಲೋಡ್ ಮಾಡುವ ಮೊದಲು, ಖುದ್ದಾಗಿ ಪರಿಶೀಲಿಸಿ, ಎಲ್ಲ ಅಂಶಗಳನ್ನು ಗಮನಿಸಿ, ಅನುಮೋದನೆ ನೀಡಬೇಕು. ಅಪ್ಲೋಡ್ ಮಾಡಿದ ಮಾಹಿತಿಯನ್ನು ಅಗತ್ಯ ದಾಖಲೆಗಳೊಂದಿಗೆ ದೃಢೀಕರಿಸಿ ನಿರ್ದೇಶನಾಲಯಕ್ಕೆ ಸಲ್ಲಿಸಬೇಕು. ಸ್ವೀಕೃತವಾದ ಮಾಹಿತಿಯಲ್ಲಿ ಯಾವುದೇ ಲೋಪದೋಷ ಕಂಡು ಬಂದಲ್ಲಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯನ್ನು ನೇರ ಹೊಣೆಯಾಗಿ ಮಾಡಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ