ಗ್ರಾಮ ವಾಸ್ತವ್ಯ ಬೂಟಾಟಿಕೆ ಎಂಬುದು ಸಾಬೀತು
Team Udayavani, Jun 27, 2019, 3:06 AM IST
ಬೆಂಗಳೂರು: ಸಿಎಂ ಕುಮಾರಸ್ವಾಮಿಯವರ ಜನವಿರೋಧಿ ಗ್ರಾಮ ವಾಸ್ತವ್ಯಕ್ಕೆ ನಮ್ಮ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕರಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇದೇ ರೀತಿ ಜನರ ಮೇಲೆ ಮಾನಸಿಕ ದೌರ್ಜನ್ಯ ಮುಂದುವರಿಸಿದರೆ ರಾಜ್ಯಾದ್ಯಂತ ಆಂದೋಲನ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ವೈಟಿಪಿಎಸ್ ಸಿಬ್ಬಂದಿಯೊಂದಿಗೆ ಮುಖ್ಯಮಂತ್ರಿಗಳ ವರ್ತನೆಯನ್ನು ತೀವ್ರವಾಗಿ ಖಂಡಿಸಿರುವ ಯಡಿಯೂರಪ್ಪ, ಮುಖ್ಯಮಂತ್ರಿಗಳು ಈ ರೀತಿ ಸಂಯಮ ಕಳೆದುಕೊಳ್ಳುತ್ತಿರುವುದು ಇದೇ ಮೊದಲಲ್ಲ. ಅವರಿಗೆ ಜನರೆಂದರೆ ಅದರಲ್ಲೂ, ಉತ್ತರ ಕರ್ನಾಟಕದ ಜನರೆಂದರೆ ಆಗುವುದಿಲ್ಲ.
ಅದೇ ಧೋರಣೆ ತೋರುವ ಮೂಲಕ ತಮ್ಮ ಗ್ರಾಮ ವಾಸ್ತವ್ಯ ಬೂಟಾಟಿಕೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನರ ಬಗ್ಗೆ ಅದರಲ್ಲೂ, ರಾಜ್ಯದಲ್ಲಿ ಬಿಜೆಪಿ ಗೆದ್ದ ಕಾರಣ ಸಂಯಮ ಕಳೆದುಕೊಳ್ಳುತ್ತಿರುವುದು ಕುಮಾರಸ್ವಾಮಿಯವರ ಕೊಳಕು ಮನಸ್ಸನ್ನು ತೋರಿಸುತ್ತದೆ.
“ಮೋದಿಗೆ, ಬಿಜೆಪಿಗೆ ಮತ ಹಾಕಿದರು’ ಎಂದು ಹೀಯಾಳಿಸಿ ಮಾತನಾಡುವುದು ಮುಖ್ಯಮಂತ್ರಿ ಸ್ಥಾನಕ್ಕೆ ಮಾಡಿದ ಅವಮಾನ. ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜನರ ಭಾವನೆಗಳನ್ನು ಹತ್ತಿಕ್ಕಿ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಪ್ರಜಾಪ್ರಭುತ್ವ ಹಾಗೂ ಜನ ವಿರೋಧಿ ಕ್ರಮ ಎಂದು ಕಿಡಿ ಕಾರಿದ್ದಾರೆ.
ಈ ರೀತಿಯ ದೌರ್ಜನ್ಯದಿಂದ ಕೂಡಿದ ಗ್ರಾಮ ವಾಸ್ತವ್ಯವನ್ನು ಜನ ಸಹಿಸುವುದಿಲ್ಲ. ಮಾನಸಿಕ ದೌರ್ಜನ್ಯ ಮುಂದುವರಿಸಿದರೆ ಬಿಜೆಪಿಯೂ ಸಹಿಸುವುದಿಲ್ಲ. ಸಮಯ ಬಂದರೆ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ