ಕೋವಿಡ್ ಕಾಲದಲ್ಲೂ ಮೂಡಿ ಬರುತ್ತಿದೆ ಭರವಸೆಯ ಬೆಳಕು; ಆಸ್ತಿ ನೋಂದಣಿ ಚೇತರಿಕೆ
ಈ ಆಗಸ್ಟ್ನಲ್ಲಿ 6 ಕೋಟಿ ರೂ.ಗೂ ಹೆಚ್ಚು ಆದಾಯ
Team Udayavani, Sep 5, 2020, 6:20 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಕುಂಠಿತಗೊಂಡಿದ್ದ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಮೂಲದ ಆದಾಯ ಕ್ರಮೇಣ ಚೇತರಿಕೆ ಕಾಣುತ್ತಿದೆ. ಈ ವರ್ಷದ ಆಗಸ್ಟ್ನಲ್ಲಿ 946.33 ಕೋಟಿ ರೂ. ಆದಾಯ ಸಂಗ್ರಹ ವಾಗಿದ್ದು, ಕಳೆದ ವರ್ಷದ ಆಗಸ್ಟ್ಗೆ ಹೋಲಿಸಿದರೆ 6 ಕೋಟಿ ರೂ. ಹೆಚ್ಚು ವರಿ ಆದಾಯ ಸಂಗ್ರಹವಾಗಿರುವುದು ವಿಶೇಷ!
ಲಾಕ್ಡೌನ್ ಹಿನ್ನೆಲೆಯಲ್ಲಿ ಕಳೆದ ಎಪ್ರಿಲ್ನಲ್ಲಿ 23 ದಿನ ಆಸ್ತಿ ನೋಂದಣಿ ಸ್ಥಗಿತವಾಗಿತ್ತು. ಎ. 24ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿತ್ತು. ಹಾಗಾಗಿ ಎಪ್ರಿಲ್ನಲ್ಲಿ ಕೇವಲ 29.81 ಕೋ. ರೂ. ಆದಾಯ ಬಂದಿತ್ತು. 2019-20ರ ಎಪ್ರಿಲ್ನಲ್ಲಿ 679.89 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು.
ಆಗಸ್ಟ್ನಲ್ಲಿ ಉತ್ತಮ
ಮೇಯಲ್ಲಿ 358.95 ಕೋಟಿ ರೂ. ಆದಾಯ ಸಂಗ್ರಹವಾಗಿದ್ದು, 2019ರ ಮೇ ಆದಾಯಕ್ಕೆ ಹೋಲಿಸಿದರೆ ಒಂದೇ ತಿಂಗಳಲ್ಲಿ 700 ಕೋ. ರೂ. ಇಳಿಕೆಯಾಗಿದೆ. ಜೂನ್ ನಲ್ಲಿ 780 ಕೋ.ರೂ. ಸಂಗ್ರಹವಾಗಿದೆ. ಜುಲೈ ಯಲ್ಲೂ 705 ಕೋಟಿ ರೂ. ಆದಾಯ ಬಂದಿದೆ. ಕಳೆದ ಆಗಸ್ಟ್ನಲ್ಲಿ ಸುಮಾರು 1.80 ಲಕ್ಷ ಆಸ್ತಿಗಳ ನೋಂದಣಿಯಾಗಿದ್ದು, 946.25 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಇದು 2019ರ ಆಗಸ್ಟ್ ತಿಂಗಳ ಆದಾಯಕ್ಕಿಂತ 6 ಕೋಟಿ ರೂ. ಹೆಚ್ಚಾಗಿದೆ.
ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಳೆದ ಐದು ತಿಂಗಳಲ್ಲಿ ಶೇ. 40ರಷ್ಟು ಆದಾಯ ಇಳಿಕೆಯಾಗಿದೆ. ಮುಂದಿನ ದಿನಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಹೆಚ್ಚಾಗಿ ವಾರ್ಷಿಕ ಗುರಿ ತಲುಪುವ ವಿಶ್ವಾಸವಿದ್ದು, ಅದಕ್ಕೆ ಪೂರಕವಾಗಿ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುವುದು.
– ಕೆ.ಪಿ. ಮೋಹನ್ರಾಜ್, ನೋಂದಣಿ ಮಹಾಪರಿವೀಕ್ಷಕರು, ಮುದ್ರಾಂಕ ಆಯುಕ್ತ
ಎಂ. ಕೀರ್ತಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ