ಬೋರ್ವೆಲ್ಗೆ ಬಿದ್ದ ಕಾರ್ಮಿಕನ ರಕ್ಷಣೆ
Team Udayavani, Feb 17, 2020, 3:00 AM IST
ಕುಂದಾಪುರ/ಉಪ್ಪುಂದ: ಮರವಂತೆಯ ಹೊರ ಬಂದರು ಪ್ರದೇಶದಲ್ಲಿ ಹ್ಯಾಂಡ್ ಬೋರ್ವೆಲ್ ತೆರೆಯುವ ಸಂದರ್ಭ ಆಕಸ್ಮಿಕವಾಗಿ ಒಳಗೆ ಬಿದ್ದ ಕಾರ್ಮಿಕರೊಬ್ಬರನ್ನು ಸತತ 6 ತಾಸುಗಳ ಕಾರ್ಯಾಚರಣೆ ಮೂಲಕ ಯಶಸ್ವಿಯಾಗಿ ಮೇಲೆತ್ತಿದ ಘಟನೆ ಭಾನುವಾರ ಸಂಭವಿಸಿದೆ. ಉಪ್ಪುಂದ ಫಿಶರೀಸ್ ಕಾಲನಿಯ ಕಂಪ್ಲಿಮನೆ ಸುಬ್ಬ ಖಾರ್ವಿಯವರ ಪುತ್ರ ರೋಹಿತ್ ಖಾರ್ವಿ (35) ಸತತ 6 ಗಂಟೆಗಳ ಕಾಲ ಹೋರಾಡಿ, ಮೇಲೆ ಬಂದವರು.
ಘಟನೆ ನಡೆದುದು ಹೇಗೆ?: ಭಾನುವಾರ ಬೆಳಗ್ಗೆ ಮರವಂತೆಯ ಹೊರ ಬಂದರು ಪ್ರದೇಶದ ಎನ್ಎಸ್ಕೆ ಸಂಸ್ಥೆಯ ಕಾರ್ಮಿಕರು ನೆಲೆಸಿರುವ ಜಾಗದಲ್ಲಿ ಹ್ಯಾಂಡ್ಪಂಪ್ ಬಳಸಲು ಕೊಳವೆ ಬಾವಿ ತೆಗೆಯಲಾಗುತ್ತಿತ್ತು. ಈ ಕಾರ್ಯದಲ್ಲಿ ರೋಹಿತ್ ಖಾರ್ವಿ ಮತ್ತು ಇನ್ನು 3 ಮಂದಿ ತೊಡಗಿಸಿಕೊಂಡಿದ್ದರು.
ರೋಹಿತ್ ಹಾಗೂ ಮತ್ತೂಬ್ಬರು ಕೆಳಗಿಳಿದಿದ್ದು, ಇನ್ನಿಬ್ಬರು ಮೇಲೆ ಇದ್ದರು. ಈ ವೇಳೆ ಸುತ್ತಲಿನ ಮಣ್ಣು ಕೊರೆಯುತ್ತಿದ್ದಂತೆ ಸಡಿಲವಾದ ಮಣ್ಣು ಕುಸಿಯಿತು. ಕೆಳಗಿದ್ದ ಒಬ್ಬರು ಮಣ್ಣು ಕುಸಿಯುತ್ತಿದ್ದಂತೆ ಮೇಲೆ ಬಂದರಾದರೂ ರೋಹಿತ್ ಅವರ ಕಾಲು ಮಣ್ಣಿನಲ್ಲಿ ಸಿಲುಕಿ ಸಿಲುಕಿಕೊಂಡಿತು. ಈ ವೇಳೆ, ಅವರ ಮೇಲೆ ಮಣ್ಣು ಕುಸಿದು ಮಣ್ಣಿನಡಿ ಸಿಲುಕಿಕೊಂಡರು. ಕೂಡಲೇ ಅಲ್ಲಿದ್ದವರು ಮೇಲೆತ್ತಲು ಪ್ರಯತ್ನಪಟ್ಟರೂ ಸಾಧ್ಯವಾಗದೆ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು.
6 ತಾಸು ಕಾರ್ಯಾಚರಣೆ: ಬೆಳಗ್ಗೆ 11.30ರ ಸುಮಾರಿಗೆ ಸುದ್ದಿ ತಿಳಿದ ತಕ್ಷಣ ಕುಂದಾಪುರದ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ, ವೈದ್ಯರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಣ ಕಾರ್ಯಾಚರಣೆ ಆರಂಭಿಸಿ 6 ತಾಸಿನ ಬಳಿಕ ರೋಹಿತ್ನ ಶರೀರಕ್ಕೆ ಬೆಲ್ಟ್ ಅಳವಡಿಸಿ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆತ್ತಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!