ಧಾರ್ಮಿಕ ಕಟ್ಟಡ ಮಸೂದೆ ಅಂಗೀಕಾರ
Team Udayavani, Sep 25, 2021, 6:54 AM IST
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಧಾರ್ಮಿಕ ಕಟ್ಟಡಗಳ(ಸಂರಕ್ಷಣೆ) ಮಸೂದೆ-2021ಅನ್ನು ಸದನ ಅನುಮೋದಿಸಿದೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಸೂದೆ ಮಂಡಿಸಿ, ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ಸಂರಕ್ಷಿಸಲು ಈ ಮಸೂದೆ ತಂದಿದ್ದೇವೆ. ಪ್ರಕರಣವು ಸುಪ್ರೀಂ ಕೋರ್ಟ್ನಲ್ಲಿ ಇರುವುದರಿಂದ ಈ ರೀತಿ ನಿರ್ಮಾಣವಾಗಿರುವ ಯಾವುದೇ ಧಾರ್ಮಿಕ ಕಟ್ಟಡವನ್ನು ಸಕ್ರಮ ಮಾಡುವುದಿಲ್ಲ. ನ್ಯಾಯಾಲಯದ ಅಂತಿಮ ಆದೇಶದವರೆಗೂ ಅವುಗಳನ್ನು ರಕ್ಷಿಸಲು ಮತ್ತು ಸದ್ಯ ಉದ್ಭವಿಸಿರುವ ಗೊಂದಲ ನಿವಾರಣೆಗೆ ಮಸೂದೆ ತಂದಿದ್ದೇವೆ. ಇದರಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ ಎಂದರು.
ಯಾವುದೇ ಧಾರ್ಮಿಕ ಕಟ್ಟಡವನ್ನು ಸಕ್ರಮ ಮಾಡುವುದಿಲ್ಲ. ಅಧಿಕಾರಿಗಳು ನ್ಯಾಯಾಲಯ ಆದೇಶ ತೋರಿಸಿ, ನೆಲಸಮ ಮಾಡುವುದನ್ನು ತಾತ್ಕಾಲಿಕವಾಗಿ ಸುಪ್ರೀಂ ಕೋರ್ಟ್ನ ಅಂತಿಮ ಆದೇಶವರೆಗೂ ತಡೆಯುವ ಕಾರ್ಯ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು. ಅನಂತರ ಆಡಳಿತ ಪಕ್ಷ ಹಾಗೂ ವಿಪಕ್ಷದ ಸದಸ್ಯರ ಒಪ್ಪಿಗೆಯಂತೆ ಮಸೂದೆ ಅಂಗೀಕಾರಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ