ಇಡಿ ವಿಚಾರಣೆ ವಿರೋಧಿಸಿ ಜು.20ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ: ಡಿಕೆ ಶಿವಕುಮಾರ್
Team Udayavani, Jul 17, 2022, 11:58 AM IST
ಬೆಂಗಳೂರು: ದೇಶದಲ್ಲಿ ತನಿಖಾ ಸಂಸ್ಥೆ ಉಪಯೋಗಿಸಿಕೊಳ್ಳಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿದೆ. ಸಂಸತ್ ಅಧಿವೇಶನವಿದ್ದರೂ ಜು.21 ರಂದು ಇಡಿ ತನಿಖೆಗೆ ಕರೆದಿದ್ದಾರೆ. ಕಿರುಕುಳ ಕೊಡುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು 50 ಗಂಟೆ ತನಿಖೆ ಮಾಡಿದ್ದರು, ಯಾವುದೇ ಸಾಕ್ಷಿಯನ್ನು ಅಧಿಕಾರಿಗಳು ಕೊಟ್ಟಿಲ್ಲ. ಕೇಳಿದ್ದ ಪ್ರಶ್ನೆಯನ್ನೇ ಕೇಳಿ ಕಿರುಕುಳ ಕೊಟಿದ್ದಾರೆ. ಸೋನಿಯಾ ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ನಮ್ಮ ನಾಯಕಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ. ಹಾಗಾಗಿ 21 ರಂದು ಬೃಹತ್ ಪ್ರತಿಭಟನೆ ಮಾಡುತ್ತಿದ್ದೇವೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಶಾಸಕರು, ನಾಯಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಬೇಕು. ಬಂಧನ ಮಾಡಿದರೂ ಚಿಂತೆ ಇಲ್ಲ, ಹೋರಾಟ ಮಾಡಲೇಬೇಕು. ಯಾವುದಕ್ಕೂ ಹೆದರುವ ಪ್ರಶ್ನೆಯಿಲ್ಲ. ನಾವೆಲ್ಲ ಸೇರಿ ಪ್ರತಿಭಟನೆ ಮಾಡಲೇಬೇಕು ಎಂದರು.
ಫ್ರೀಡಂ ಪಾರ್ಕ್ ನಿಂದ ರಾಜಭವನದವರೆಗೆ ಪ್ರತಿಭಟನೆ ಮಾಡುತ್ತೇವೆ. 22 ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ. 30 ಜಿಲ್ಲೆಗೆ ವೀಕ್ಷಕರ ನೇಮಿಸಿದ್ದೇವೆ. ನಾನು, ಸಿದ್ದರಾಮಯ್ಯ, ಹರಿಪ್ರಸಾದ್, ಕಾರ್ಯಧ್ಯಕ್ಷರು ಎಲ್ಲರೂ ಜಿಲ್ಲಾ ಕೇಂದ್ರಗಳಿಗೆ ಹೋಗುತ್ತೇವೆ ಎಂದರು.
ಇದನ್ನೂ ಓದಿ:ಮಡಿಕೇರಿ – ಮಂಗಳೂರು: ರಸ್ತೆ ಸಂಚಾರ ಬಂದ್, ಬದಲಿ ರಸ್ತೆಯಲ್ಲಿ ಸಂಚರಿಸಲು ಸೂಚನೆ
ಆ.15 ರಂದು ವಾಕ್ ಫಾರ್ ಫ್ರೀಡಂ ಪಾದಯಾತ್ರೆ ಮಾಡುತ್ತೇವೆ. ಪಕ್ಷಾತೀತವಾಗಿ ಪಾದಯಾತ್ರೆ ಇರುತ್ತದೆ. ಎಲ್ಲಾ ಸಂಘ ಸಂಸ್ಥೆಗಳಿಗೆ ಆಹ್ವಾನ ಕೊಟ್ಟಿದ್ದೇವೆ. ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದವರ ಮನೆಗೆ ಹೋಗುತ್ತೇವೆ. ಅವರಿಗೆ ಗೌರವ ಕೊಡುವ ಕೆಲಸ ಮಾಡುತ್ತೇವೆ. ಬೆಂಗಳೂರು ಸೇರಿದಂತೆ ಎಲ್ಲ ಕಡೆಯಿಂದ ಜನರು ಭಾಗಿಯಾಗುತ್ತಾರೆ. ಇದು ಕಾಂಗ್ರೆಸ್ ಕಾರ್ಯಕ್ರಮವಲ್ಲ, ರಾಷ್ಟ್ರದ ಕಾರ್ಯಕ್ರಮ ಎಂದು ಡಿಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್