Congress ಒಳ ಜಗಳ ಮುಚ್ಚಿಕೊಳ್ಳಲು ದೆಹಲಿಯಲ್ಲಿ ಪ್ರತಿಭಟನೆ: ಪ್ರಹ್ಲಾದ ಜೋಶಿ
ಇಬ್ಬರ ಪ್ರತಿಷ್ಠೆಗಾಗಿ ಈ ಹೋರಾಟ
Team Udayavani, Feb 3, 2024, 1:46 PM IST
ಹುಬ್ಬಳ್ಳಿ: ರಾಜ್ಯ ಸರಕಾರವು ತನ್ನ ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ಒಳ ಜಗಳ ಮುಚ್ಚಿಕೊಳ್ಳುವುದಕ್ಕಾಗಿ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕೇಂದ್ರದಿಂದ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬುವುದು ಕಾಂಗ್ರೆಸ್ ಪ್ರೇರಿತವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಯುಪಿಎ ಹಾಗೂ ಇಂದಿನ ಬಿಜೆಪಿ ಆಡಳಿತದಲ್ಲಿ ಅಭಿವೃದ್ದಿ ಯೋಜನೆಗಳನ್ನು ನೋಡಿದರೆ ಎಲ್ಲವೂ ಸ್ಪಷ್ಟವಾಗುತ್ತದೆ. ಹಿಂದೆ ಎಷ್ಟು ತೆರಿಗೆ ಬರುತ್ತಿತ್ತು. ರಾಜ್ಯಕ್ಕೆ ಎಷ್ಟು ಬಿಡುಗಡೆ ಮಾಡುತ್ತಿದ್ದರು ಎಂಬುವುದನ್ನು ಅವಲೋಕನ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದರು.
ತಮ್ಮ ವೈಫಲ್ಯ ಮುಚ್ಚಿಕೊಳ್ಳುವ ಕಾರಣಕ್ಕೆ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಅವರ ಪ್ರತಿಷ್ಠೆಗಾಗಿ ಈ ಹೋರಾಟ ಎಂದು ವ್ಯಂಗ್ಯವಾಡಿದರು.
ಶೇ. 246 ರಷ್ಟು ಜಾಸ್ತಿ ಅನುದಾನ ಬಂದಿದೆ
2004-14 ರಲ್ಲಿ ಯುಪಿಎ ಸರಕಾರವು 60 ಸಾವಿರ ಕೋಟಿ ರೂ. ಅನುದಾನ ನೀಡಿದ್ದರು. ನಮ್ಮ ಅವಧಿಯಲ್ಲಿ 2.36 ಲಕ್ಷ ಕೋಟಿ ರೂ. ನೀಡಲಾಗಿದ್ದು, ಶೇ.243 ರಷ್ಟು ಹೆಚ್ಚಾಗಿದೆ. ಯುಪಿಎ ಅವಧಿಯ 2004-14 ರಲ್ಲಿ ತೆರಿಗೆ ಹಂಚಿಕೆಯಲ್ಲಿ 81 ಸಾವಿರ ಕೋಟಿ ರೂ. ರಾಜ್ಯಕ್ಕೆ ನೀಡಿದೆ. 2014-24 ರವರೆಗೆ ನಾವು 2.82 ಲಕ್ಷ ಕೋಟಿ ರೂ. ನೀಡಿದ್ದೇವೆ. ಇದರಲ್ಲಿ ಶೇ. 246 ರಷ್ಟು ಜಾಸ್ತಿಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್