ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಡಿ.16, 17ರಂದು ಪ್ರತಿಭಟನೆ
Team Udayavani, Dec 15, 2021, 8:15 PM IST
ಬೆಂಗಳೂರು: ರಾಜ್ಯ ಬ್ಯಾಂಕ್ ಸಂಘಟನೆಗಳ ಐಕ್ಯ ವೇದಿಕೆ ವತಿಯಿಂದ ರಾಷ್ಟ್ರೀಯ ಬ್ಯಾಂಕ್ಗಳ ಖಾಸಗೀಕರಣ ನಿಲ್ಲಿಸುವಂತೆ ಒತ್ತಾಯಿಸಿ ಡಿ.16, 17ರಂದು ಬೆಳಗ್ಗೆ 10.30ಕ್ಕೆ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಬ್ಯಾಂಕ್ ಸಂಘಟನೆಗಳ ಐಕ್ಯ ವೇದಿಕೆ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ಗಳ ಖಾಸಗೀಕರಣ ಎಂದರೇ ದೇಶದ ಹಣಕಾಸು ಕ್ಷೇತ್ರವನ್ನು ದೇಶಿ-ವಿದೇಶಿ ಬಂಡವಾಳಗಾರರಿಗೆ ಒಪ್ಪಿಸುವುದು ಎಂದರ್ಥ. ಜನರ ಉಳಿತಾಯದ ಹಣದ ಲೂಟಿಗೆ ಅವಕಾಶ, ಠೇವಣಿದಾರರ ಹಿತಾಸಕ್ತಿಗೆ ಧಕ್ಕೆ, ಉದ್ಯೋಗಾವಕಾಶಗಳ ಹಾಗು ಮೀಸಲಾತಿಯಂತಹ ಸಾಮಾಜಿ ನ್ಯಾಯಕ್ಕೆ ಧಕ್ಕೆಯಾಗುವುದರ ಜತೆಗೆ ಶಾಖೆಗಳ ಮುಚ್ಚುವಿಕೆ, ಜನಸಾಮಾನ್ಯರು ಬ್ಯಾಂಕಿಂಗ್ ಸೇವೆಗಳಿಂದ ವಂಚಿತರಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಖಾಸಗೀಕರಣ ಉದ್ಯೋಗ ಕಡಿತ:
ಸಾರ್ವಜನಿಕ ವಲಯದ ಖಾಸಗಿಕರಣ ಮತ್ತು ಬಂಡವಾಳ ಹಿಂತೆಗೆತ ತಂತ್ರಗಾರಿಕೆ ನೀತಿ ಒಂದು ಭಾಗವಾಗಿದೆ. 1991ರಿಂದಲೂ ಆಡಳಿತ ಸರಕಾರಗಳು 5.30 ಲ.ಕೋಟಿ ಮೌಲ್ಯದ ಸರಕಾರದ ಸ್ವಾಮಯದ ಷೇರು ಗಳನ್ನು ಇಂದಿನವರೆಗೂ ಮಾರಾಟ ಮಾಡಿದೆ. ಇದರಲ್ಲಿ ಶೇ.70ರಷ್ಟು ಬಂಡವಾಳ ಹಿಂತೆಗೆದುಕೊಂಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್