ಪ್ರಚೋದನಕಾರಿ ಭಾಷಣ: ಯತ್ನಾಳ್ ವಿರುದ್ಧದ ಪ್ರಕರಣಕ್ಕೆ ತಡೆ
Team Udayavani, Mar 16, 2024, 12:28 AM IST
ಬೆಂಗಳೂರು: ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯು ನ್ಯಾ| ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಸ್ವಲ್ಪ ಹೊತ್ತು ವಾದ ಆಲಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ವಿಜಯಪುರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಹಾಗೂ ಅದರ ಸಂಬಂಧ ವಿಜಯಪುರ 1ನೇ ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆಗೆ ಹೈಕೋರ್ಟ್ನ ಮುಂದಿನ ವಿಚಾರಣೆವರೆಗೆ ತಡೆ ನೀಡಿತು.
ಅಲ್ಲದೇ ಗಾಂಧಿಚೌಕ್ ಪೋಲಿಸ್ ಠಾಣೆ ಹಾಗೂ ದೂರುದಾರ ಅಬೂಬಕರ್ ರಾಜೇಸಾಬ್ ಕಂಬಾಗಿ ಅವರಿಗೆ ನೋಟಿಸ್ ಜಾರಿಗೆ ನ್ಯಾಯಪೀಠ ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್