ಪಿಎಸ್ಐ ಅಕ್ರಮ-ಎಡಿಜಿಪಿ ಅಮೃತ್ಪೌಲ್ ವಿಚಾರಣೆಗೆ ಗೈರು
ಡೀಲ್ ಹಣಕ್ಕಾಗಿ ಶೋಧ, ಮುಳುವಾದ ಶಾಂತಕುಮಾರ್ ಹೇಳಿಕೆ
Team Udayavani, May 27, 2022, 9:38 PM IST
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೂಮ್ಮೆ ವಿಚಾರಣೆಗೆ ಹಾಜರಾಗಬೇಕಿದ್ದ ಎಡಿಜಿಪಿ ಅಮೃತ್ಪೌಲ್ ಗೈರಾಗಿದ್ದಾರೆ.
ಗುರುವಾರ ಸುಮಾರು ಐದು ಗಂಟೆಗಳ ವಿಚಾರಣೆ ನಡೆಸಿದ್ದ ಸಿಐಡಿ ಶುಕ್ರವಾರಮತ್ತೂಮ್ಮೆ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ, ವೈಯಕ್ತಿಕ ಕಾರಣ ನೀಡಿ ಅಮೃತ್ಪೌಲ್ ವಿಚಾರಣೆಗೆ ಹಾಜರಾಗಿದ್ದಾರೆ.
ಹೀಗಾಗಿ ಸೋಮವಾರ ಮತ್ತೂಮ್ಮೆ ವಿಚಾರಣೆಗೆ ಹಾಜರಾಗಬೇಕು ಎಂದು ಸಿಐಡಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಅಮೃತ್ಪೌಲ್ಗೆ ಬಂಧನ ಭೀತಿ ಎದುರಾಗಿದೆ ಎಂದು ಹೇಳಲಾಗಿದೆ.
ಮುಳುವಾದ ಶಾಂತಕುಮಾರ್ ಹೇಳಿಕೆ
ಪ್ರಕರಣದ ಕಿಂಗ್ಪಿನ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ವಿಚಾರಣೆ ಸಂದರ್ಭದಲ್ಲಿ ತನ್ನ ಅಕ್ರಮದ ಹಣದಲ್ಲಿ ಅಮೃತ್ಪೌಲ್ಗೂ ಪಾಲು ನೀಡುತ್ತಿದ್ದೆ. ಜತೆಗೆ ನೇಮಕಾತಿ ಅಕ್ರಮದ ಪ್ರತಿಯೊಂದು ಮಾಹಿತಿಯನ್ನು ನೀಡಲಾಗಿತ್ತು. ಅವರ ಸೂಚನೆ, ಸಲಹೆ ಮೇರೆಗೆ ಎಲ್ಲವೂ ನಡೆಯುತ್ತಿತ್ತು. ಇದೇ ವೇಳೆ ಅಮೃತ್ಪೌಲ್ಗೆ ಹಣ ವರ್ಗಾವಣೆಯಾಗಿದೆ ಎನ್ನಲಾದ ಬ್ಯಾಂಕ್ ಮಾಹಿತಿ ಸೇರಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಸಿಐಡಿ, ಅವುಗಳ ಆಧಾರದ ಮೇಲೆ ವಿಚಾರಣೆ ಮುಂದುವರಿಸಿದೆ. ಅಗತ್ಯ ಬಿದ್ದಲ್ಲಿ ಡಿವೈಎಸ್ಪಿ ಶಾಂತಕುಮಾರ್ನನ್ನು ಮತ್ತೂಮ್ಮೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಅಮೃತ್ಪೌಲ್ ಮತ್ತು ಶಾಂತಕುಮಾರ್ರ ಮುಖಾಮುಖೀ ವಿಚಾರಣೆ ನಡೆಸಲಾಗುತ್ತದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಡೀಲ್ ಹಣಕ್ಕಾಗಿ ಶೋಧ
ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಸುಮಾರು 300 ಕೋಟಿ ರೂ. ಗೂ ಅಧಿಕ ಡೀಲ್ ನಡೆದಿರುವುದ ಸಿಐಡಿ ತನಿಖೆಯಲ್ಲಿ ಸಾಬೀತಾಗಿದೆ. ಹೀಗಾಗಿ ಹಣ ಯಾರಿಂದ ಯಾರಿಗೆಲ್ಲ ಹೋಗಿದೆ ಎಂಬ ಬಗ್ಗೆ ಶೋಧಿಸಲು ತನಿಖಾ ತಂಡ ಸಿದ್ದತೆ ನಡೆಸಿದೆ. ಈಗಾಗಲೇ ಕೆಲವೊಂದು ಮಾಹಿತಿ ಸಂಗ್ರಹಿಸಿದ್ದು, ಪ್ರಭಾವಿ ರಾಜಕೀಯ ಮುಖಂಡರು, ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳಿಗೆ ರವಾನೆಯಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಬೇಕಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ