ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 


Team Udayavani, Jul 6, 2022, 7:30 AM IST

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ಸೋಮವಾರ ಬಂಧನಕ್ಕೆ ಒಳಗಾಗಿರುವ ಎಡಿಜಿಪಿ ಅಮೃತ್‌ ಪೌಲ್‌ ಅವರನ್ನು ವಿಚಾರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಅವರ ಮೊಬೈಲ್‌ ಫೋನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಮೊಬೈಲ್‌ನಲ್ಲಿ ಇರುವ ಸಾಕ್ಷ್ಯಗಳನ್ನು ಅಮೃತ್‌ ಪೌಲ್‌ ನಾಶಪಡಿಸಿದ್ದಾರೆ. ಹೀಗಾಗಿ ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರಲ್ಲಿ ಇರುವ ದಾಖಲೆಗಳನ್ನು ರಿಟ್ರೀವ್‌ ಮಾಡಿದ ಬಳಿಕ ಅವರು ಯಾರೊಂದಿಗೆಲ್ಲ ವ್ಯವಹಾರ ನಡೆಸುತ್ತಿದ್ದರು ಎಂಬಿತ್ಯಾದಿ ಸಾಕ್ಷ್ಯಗಳು ಲಭ್ಯವಾಗಲಿವೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಈ ಹಿಂದೆ ವಶಕ್ಕೆ ಪಡೆಯಲಾಗಿದ್ದ ಡಿವೈಎಸ್ಪಿ ಶಾಂತಕುಮಾರ್‌ ಮೊಬೈಲನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ರಿಟ್ರೀವ್‌ ಮಾಡಲಾಗಿದೆ. ಈ ವೇಳೆ ಕೆಲವು ಆಡಿಯೋಗಳು ಲಭ್ಯವಾಗಿವೆ. ಅಮೃತ್‌ ಪೌಲ್‌ ಮತ್ತು ಶಾಂತಕುಮಾರ್‌ ನಡುವಣ ಸಂಭಾಷಣೆಯೂ ಇದರಲ್ಲಿ ಸೇರಿದೆ. ಅದರಲ್ಲಿ ಅಮೃತ್‌ ಪೌಲ್‌, “ಒಎಂಆರ್‌ ಶೀಟ್‌ಗಳನ್ನು ಸಂಗ್ರಹಿಸಿಟ್ಟಿದ್ದ ಕೊಠಡಿ ಮತ್ತು ಕಿಟ್‌ ಬಾಕ್ಸ್‌ನ ಪಾಸ್‌ವರ್ಡ್‌ ಮತ್ತು ಕೀ ತೆಗೆದುಕೊಂಡು ಏನು ಬೇಕಾದರೂ ಮಾಡಿಕೋ. ಆದರೆ ಮಾತುಕತೆಯಂತೆ ಹಣ ನೀಡಬೇಕು ಅಷ್ಟೇ’ ಎಂದು ಬೇಡಿಕೆ ಮಂಡಿಸಿರುವುದು ಬಹಿರಂಗವಾಗಿದೆ. ಇದಾದ ಬೆನ್ನಲ್ಲೇ ಶಾಂತಕುಮಾರ್‌ 5 ಕೋಟಿ ರೂ.ಗಳನ್ನು ಅಮೃತ್‌ ಪೌಲ್‌ ಸೂಚಿಸಿದ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಆದರೆ ಅವು ಯಾರ ಖಾತೆಗಳು ಎಂಬುದು ಪತ್ತೆಯಾಗಬೇಕಿದೆ. ಹೀಗಾಗಿ ಸಂಬಂಧಿಸಿದ ಬ್ಯಾಂಕ್‌ಗೆ ಪತ್ರ ಬರೆಯಲಾಗಿದೆ. ಅಲ್ಲಿಂದ ಮಾಹಿತಿ ಬಂದ ಬಳಿಕ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಎಡಿಜಿಪಿ ನೇತೃತ್ವದಲ್ಲಿ ತನಿಖೆ
ಅಮೃತ್‌ ಪೌಲ್‌ ಅವರನ್ನು ಸಿಐಡಿ ಎಡಿಜಿಪಿ ಉಮೇಶ್‌ ಕುಮಾರ್‌ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶೇಖರ್‌ ವಿಚಾರಣೆ ನಡೆಸಲು ಮುಂದಾಗಿದ್ದರು. ಆದರೆ ಅಮೃತ್‌ ಪೌಲ್‌ ತಾನೊಬ್ಬ ಎಡಿಜಿಪಿ ಶ್ರೇಣಿ ಅಧಿಕಾರಿಯಾಗಿರುವುದರಿಂದ ನಿನ್ನಿಂದ ವಿಚಾರಣೆಗೆ ಒಳಪಡುವುದಿಲ್ಲ ಎಂದು ವರಸೆ ತೆಗೆದಿದ್ದರು. ಬಳಿಕ ಎಡಿಜಿಪಿ ಉಮೇಶ್‌ ಕುಮಾರ್‌ ಅವರೇ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಶಾಂತಕುಮಾರ್‌ ಮೇಲೆ ಆರೋಪ
ವಿಚಾರಣೆ ಸಂದರ್ಭ ಪೌಲ್‌, ಸ್ಟ್ರಾಂಗ್‌ ರೂಮ್‌ ಕೀಲಿಕೈ ಶಾಂತ ಕುಮಾರ್‌ಗೆಕೊಟ್ಟದ್ದು ನಿಜ. ಆತ ಒಎಂಆರ್‌ ಶೀಟ್‌ ಪರಿಶೀಲನೆಯ ನೆಪದಲ್ಲಿ ಕೀಲಿಕೈ ಪಡೆದಿದ್ದ. ಆದರೆ ಆತ ಅಕ್ರಮ ನಡೆಸುತ್ತಾನೆ ಎನ್ನುವುದು ಗೊತ್ತಿರಲಿಲ್ಲ  ಎಂದು ಶಾಂತಕುಮಾರ್‌ ವಿರುದ್ಧವೇ ಆರೋಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಜುನಾಥ್‌ ಮನೆ ಶೋಧ
ಮಂಗಳವಾರ ಸೆರೆಯಾಗಿರುವ ಐಎಎಸ್‌ ಅಧಿಕಾರಿ ಜೆ. ಮಂಜುನಾಥ್‌ಗೆ ಸೇರಿದ ಫ್ಲ್ಯಾಟ್‌ನಲ್ಲಿ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.  ಯಶವಂತಪುರದ ಸಲಾರ್‌ ಪುರಿಯಾ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಸುಮಾರು ಐದೂವರೆ ತಾಸುಗಳ ಕಾಲ ಶೋಧಿಸಲಾಗಿದೆ. ಈ ವೇಳೆ ಕೆಲವು ದಾಖಲೆಗಳು ಪತ್ತೆಯಾಗಿವೆ ಎಂದು ಎಸಿಬಿ ಮೂಲಗಳು ತಿಳಿಸಿವೆ. ಡಿವೈಎಸ್ಪಿ ನೇತೃತ್ವದಲ್ಲಿ 8 ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ಲಂಚಕ್ಕೆ ಸಂಬಂಧಿಸಿ ದಾಖಲೆ ಅಥವಾ ಸಾಕ್ಷ್ಯ ಇದೆಯೇ ಎಂದು ಶೋಧಿಸಲಾಗಿದೆ ಎಂಬುದಾಗಿ ಎಸಿಬಿ ಮೂಲಗಳು ತಿಳಿಸಿವೆ.

 

 

 

 

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.