ಪಿಎಸ್ಐ ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪೌಲ್ ವಿಚಾರಣೆ
Team Udayavani, May 27, 2022, 6:12 AM IST
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ತನಿಖಾ ತಂಡ ಗುರುವಾರ ಪ್ರಕರಣದ ರೂವಾರಿ ಎಂದು ಹೇಳಲಾಗಿರುವ ನೇಮಕಾತಿ ವಿಭಾಗದ ಈ ಹಿಂದಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮೃತ್ಪೌಲ್ ಅವರನ್ನು ವಿಚಾರಣೆ ನಡೆಸಿದೆ.
ಬೆಳಗ್ಗೆ 11 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಕಾರ್ಲಟನ್ ಹೌಸ್ನಲ್ಲಿರುವ ಸಿಐಡಿ ಕಚೇರಿಗೆ ಆಗಮಿಸಿದ ಅಮೃತ್ ಪೌಲ್ ಅವರನ್ನು ಸಿಐಡಿ ಎಡಿಜಿಪಿ ಉಮೇಶ್ ಕುಮಾರ್ ಮತ್ತು ತಂಡ ಸಂಜೆ ನಾಲ್ಕು ಗಂಟೆವರೆಗೆ ವಿಚಾರಣೆ ನಡೆಸಿದೆ.
ಈ ವೇಳೆ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರೂ ಅಕ್ರಮ ನೇಮಕಾತಿ ತಮ್ಮ ಗಮನಕ್ಕೆ ಬಂದಿರಲಿಲ್ಲವೇ? ಡಿವೈಎಸ್ಪಿ ಶಾಂತಕುಮಾರ್ ತನ್ನ ಕೆಳಗಿನ ಸಿಬಂದಿಯನ್ನು ಅಕ್ರಮದಲ್ಲಿ ಸೇರಿಸಿಕೊಂಡು ಕೋಟ್ಯಂತರ ರೂ. ಅವ್ಯವಹಾರ ನಡೆಸಿದ್ದ ಬಗ್ಗೆ ಮಾಹಿತಿ ಇರಲಿಲ್ಲವೇ? ಕಲಬುರಗಿಯಲ್ಲಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ದೂರು ಬಂದಿದ್ದರೂ ಯಾಕೆ ಕ್ರಮ ಕೈಗೊಳ್ಳಲಿಲ್ಲ? ಶಾಂತಕುಮಾರ್ ನಡೆಸಿದ ಅಕ್ರಮದಲ್ಲಿ ತಮಗೂ ಪಾಲು ಸಿಕ್ಕಿದೆ ಎನ್ನಲಾಗಿದೆ ಎಂಬ ಬಗ್ಗೆ ನಿಮ್ಮ ಅಭಿಪ್ರಾಯವೇನು ಮುಂತಾದ 50ಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಡಿವೈಎಸ್ಪಿ ಶಾಂತಕುಮಾರ್ ಹೇಳಿಕೆ ಮೇರೆಗೆ ಅಮೃತ್ಪೌಲ್ಗೆ ನೋಟಿಸ್ ನೀಡಲಾಗಿತ್ತು. ಅಗತ್ಯಬಿದ್ದಲ್ಲಿ ಮತ್ತೂಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕಳುಹಿಸಲಾಗಿದೆ ಎಂದುಮೂಲಗಳು ತಿಳಿಸಿವೆ.
ಇನ್ನು ಕೆಲವೊಂದು ಪ್ರಶ್ನೆಗಳಿಗೆ ಗೊಂದಲದ ಉತ್ತರ ನೀಡಿರುವ ಅಮೃತ್ಪೌಲ್, ಕೆಲ ಪ್ರಶ್ನೆಗಳಿಗೆ ಮಾಹಿತಿ ಇಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ