
ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಶೀಘ್ರ ತೀರ್ಮಾನ: ಪ್ರವೀಣ್ ಸೂದ್
Team Udayavani, Sep 18, 2022, 10:00 PM IST

ಬೆಂಗಳೂರು: ಪಿಎಸ್ಐ ಅಕ್ರಮ ಪರೀಕ್ಷೆ ಪ್ರಕರಣ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಪಿಎಸ್ಐ ಮರು ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸುತ್ತೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 545 ಪಿಎಸ್ಐ ಅಕ್ರಮ ಪರೀಕ್ಷೆ ಸಂಬಂಧ ಮರು ಪರೀಕ್ಷೆ ನಡೆಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಬದ್ಧವಾಗಿದೆ.
ಕೆಲವರು ಮರು ಪರೀಕ್ಷೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಕೂಡ ಸರ್ಕಾರದ ಪರವಾಗಿ ಹೇಳಿದೆ. ಸಿಐಡಿ ತನಿಖೆ ಮುಕ್ತಾಯಗೊಂಡು ಆರೋಪಪಟ್ಟಿ ಸಲ್ಲಿಕೆಯಾದ ಬಳಿಕ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುತ್ತದೆ.
ಯಾಕೆಂದರೆ, ಈ ಬಾರಿಯ ಪಿಎಸ್ಐ ಪ್ರಕರಣದಲ್ಲಿ ಭಾಗಿಯಾಗುವ ಆರೋಪಿಗೆ ಮುಂದೆ ಯಾವುದೇ ಪರೀಕ್ಷೆಯಲ್ಲಿ ಅವಕಾಶ ದೊರೆಯಂತೆ ಮಾಡಬೇಕಿದೆ. ಒಂದೆರಡು ತಿಂಗಳಲ್ಲಿ ಸಿಐಡಿ ಆರೋಪಪಟ್ಟಿ ಸಲ್ಲಿಸಿದ ಬಳಿಕ ದಿನಾಂಕ ತಿಳಿಸುತ್ತೇವೆ ಎಂದರು.
ಇನ್ನು ಸಹ ಶಿಕ್ಷಕರ ತನಿಖೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿಐಡಿ ಸ್ವತಂತ್ರ ಸಂಸ್ಥೆ. ತನಿಖೆ ಮುಗಿಯುವರೆಗೂ ಯಾರಿಗೂ ಮಾಹಿತಿ ನೀಡುವುದಿಲ್ಲ. ಆರೋಪಪಟ್ಟಿ ಸಲ್ಲಿಸಿದ ಬಳಿಕ ಪ್ರಕರಣದ ಎಲ್ಲ ಆರೋಪಿಗಳು ಹಾಗೂ ಕೃತ್ಯದ ಮಾದರಿ ಬೆಳಕಿಗೆ ಬರಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್

ಮಣಿಪಾಲ: ಶಿವಪಾಡಿಯಲ್ಲಿ”ಅತಿರುದ್ರ ಮಹಾಯಾಗ ಸಂಕಲ್ಪ ದಿವಸ್”ಪೂರ್ವ ಸಿದ್ಧತೆ ಸಭೆ

ಬಲಿಜ ಸಮುದಾಯಕ್ಕೆ ಕೂಡಲೇ ಪೂರ್ಣ ಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಿ : ಮಾಜಿ ಸಚಿವ ಎಂ.ಆರ್. ಸೀತಾರಾಂ

ಬಿಎಸ್ ವೈ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ನಳಿನ್ ಕಟೀಲ್

ಸುಮಲತಾ ಅವರು ಬಿಜೆಪಿ ಸೇರಿದರೆ ಸಂತೋಷ: ಸಿ.ಟಿ ರವಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
