ಪಿಎಸ್ಐ ಹಗರಣದಲ್ಲಿ ಮಾಜಿ ಸಿಎಂ ಮಗನ ಕೈವಾಡವೇನು? ಕಾಂಗ್ರೆಸ್ ಗೆ ಅಸ್ತ್ರವಾದ ಯತ್ನಾಳ್ ಆರೋಪ


Team Udayavani, Oct 5, 2022, 10:59 AM IST

ಪಿಎಸ್ಐ ಹಗರಣದಲ್ಲಿ ಮಾಜಿ ಸಿಎಂ ಮಗನ ಕೈವಾಡವೇನು? ತನಿಖೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಉಂಟು ಮಾಡಿದ್ದ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧಿಸಿದಂತೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ನಾಯಕರ ವಿರುದ್ಧವೇ ಕಿಡಿಕಾರಿದ್ದು, ಕಾಂಗ್ರೆಸ್ ಗೆ ಅಸ್ತ್ರ ಸಿಕ್ಕಂತಾಗಿದೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನ ನೇರ ಕೈವಾಡವಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ನ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಯತ್ನಾಳ್‌ರ ಈ ಆರೋಪ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಈ ಆರೋಪ ಮಾಡಿದ್ದಾರೆ. ಆದರೂ ಸಿಐಡಿ ಅಧಿಕಾರಿಗಳು ಯತ್ನಾಳ್ ಆರೋಪದ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲ? ಕಳೆದ ಅಧಿವೇಶನದಲ್ಲಿ ಪಿಎಸ್ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ನಾವು ಒತ್ತಾಯಿಸಿದ್ದೆವು. ಆದರೆ ಯತ್ನಾಳ್ ಈ ಹಗರಣದ ಕಿಂಗ್‌ಪಿನ್‌ ಮಾಜಿ ಸಿಎಂ ಪುತ್ರ ಎಂದಿದ್ದಾರೆ. ಜೊತೆಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನಮ್ಮ ಒತ್ತಾಯಕ್ಕಂತೂ ಈ ಸರ್ಕಾರ ಒಪ್ಪಲಿಲ್ಲ. ಕೊನೆಯ ಪಕ್ಷ ಯತ್ನಾಳ್ ಒತ್ತಾಯಕ್ಕಾದರೂ ಬೆಲೆ ಕೊಡಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಕ್ಯಾಚ್ ಹಿಡಿದು ಬೌಂಡರಿ ಗೆರೆ ತುಳಿದ ಸಿರಾಜ್ ಗೆ ನಿಂದಿಸಿದ ದೀಪಕ್; ವಿಡಿಯೋ ನೋಡಿ

ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್ಐ ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‌ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ‌ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ ತನಿಖೆಯಾಗಬೇಕು. ಪಿಎಸ್ಐ ನೇಮಕಾತಿಯ ಅಧಿಸೂಚನೆ ಹೊರಟಿದ್ದು ಇದೇ ಸರ್ಕಾರದ ಅವಧಿಯಲ್ಲಿ. ಹಗರಣ ನಡೆದಿರುವುದೂ ಇದೇ ಅವಧಿಯಲ್ಲಿ. ಈ ಅವಧಿಯಲ್ಲೇ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಪದವಿ ಬಿಟ್ಟು ಮಾಜಿಯಾಗಿದ್ದಾರೆ. ಯತ್ನಾಳ್ ಆರೋಪ ಮಾಡುತ್ತಿರುವುದು ಬಿಎಸ್ ವೈ ಪುತ್ರನ ವಿರುದ್ಧವೇ? ಬೆಂಕಿಯಿಲ್ಲದೆ ಹೊಗೆ ಬರಲು ಸಾಧ್ಯವಿಲ್ಲವೆಂಬಂತೆ ಯತ್ನಾಳ್ ಸುಮ್ಮನೆ ಆರೋಪ ಮಾಡಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ.

ಪಿಎಸ್ಐ ಹಗರಣ ಈ ಸರ್ಕಾರದ ಅತಿ ದೊಡ್ಡ ಕಳಂಕ. ಸಿಐಡಿ ಮೂಲಕ ಕಾಟಾಚಾರದ ತನಿಖೆ ಮಾಡಿಸಿ ತನ್ನ ಮೇಲಿರುವ ಕಳಂಕ ತೊಳೆದುಕೊಳ್ಳಲು ಈ ಸರ್ಕಾರ ಯತ್ನಿಸುತ್ತಿದೆ. ಆದರೆ ಈ ಸರ್ಕಾರದ ಭಾಗವಾಗಿರುವವರೇ ಈ ಹಗರಣದಲ್ಲಿ ಪ್ರಭಾವಿಗಳ ಭಾಗಿಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸರ್ಕಾರ ಪ್ರಾಮಾಣಿಕವಾಗಿದ್ದರೆ ಈಗಲಾದರೂ ಪಾರದರ್ಶಕ ತನಿಖೆ ನಡೆಸಲಿ ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.