ಪಿಎಸ್ಐ ಹಗರಣ: ಕೆಎಸ್ಆರ್ ಪಿ ಡಿವೈಎಸ್ಪಿ ಸಿಐಡಿ ವಶಕ್ಕೆ
ಅಕ್ರಮದ ಕುರಿತಾಗಿ ಇತರ ಆಯಾಮಗಳಲ್ಲಿ ತನಿಖೆ
Team Udayavani, May 6, 2022, 9:47 PM IST
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಶುಕ್ರವಾರ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕಲಬುರಗಿ ವಿಭಾಗದ ಡಿವೈಎಸ್ಪಿ ವೈಜನಾಥ ರೇವೂರ ಅವರನ್ನು ವಶಕ್ಕೆ ಪಡೆದರು.
ವೈಜನಾಥ ರೇವೂರ ಸಹ ಹಲವು ವರ್ಷಗಳಿಂದ ಅಕ್ರಮ ನೇಮಕಾತಿ ಮಾಡಿಸುತ್ತಿದ್ದರು. ಪ್ರಸ್ತುತ ವಾಗಿ ಅಭ್ಯರ್ಥಿಗಳು ಹಾಗೂ ಕಿಂಗ್ ಪಿನ್ ಗಳಿಗೆ ಸಹಾಯ ಮಾಡಿದ ಆರೋಪದ ಮೇರೆಗೆ ವಶಪಡಿಸಿಕೊಳ್ಳಲಾಗಿದೆ.
ಕೆಎಸ್ಆರ್ ಪಿಯ ನಾಲ್ಕನೇ ಪ್ರಶಿಕ್ಷಣಾರ್ಥಿಗಳ ತಂಡದ ನಿರ್ಗಮನ ಪಥಸಂಚಲನದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಭಾಗವಹಿಸಿ ತೆರಳಿದ ಬೆನ್ನಲ್ಲೇ ಕೆಎಸ್ಆರ್ ಪಿಯ ಹಿರಿಯ ಅಧಿಕಾರಿಯನ್ನು ವಶಪಡಿಸಿಕೊಳ್ಳಲಾಗಿದೆ.
ವೈಜನಾಥ ಮೂಲತಃ ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದವರು. ಇವರಿಗೆ ಸಂಬಂಧಿಸಿದಂತೆ ಅಕ್ರಮದ ಕುರಿತಾಗಿ ಇತರ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.