ಪಿಯು ಪರೀಕ್ಷೆ: ಓರ್ವ ಡಿಬಾರ್
Team Udayavani, Mar 11, 2017, 8:33 AM IST
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಎರಡನೇ ದಿನವಾದ ಶುಕ್ರವಾರ ಓರ್ವ ವಿದ್ಯಾರ್ಥಿ ಡಿಬಾರ್ ಆಗಿರುವ ಪ್ರಕರಣ
ಹೊರತುಪಡಿಸಿದರೆ ಬೇರೆ ಯಾವುದೇ ಗೊಂದಲಗಳಿಲ್ಲದೆ ರಾಜ್ಯಾದ್ಯಂತ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ನಕಲು ಮಾಡುತ್ತಿದ್ದ ತುಮಕೂರಿನ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಇನ್ನು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡಿದ್ದ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಮೊದಲೇ ಘೋಷಿಸಿಕೊಂಡಿದ್ದಂತೆ ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಎರಡನೇ ದಿನವಾದ ಶುಕ್ರವಾರ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ವಿಷಯಗಳ ಪರೀಕ್ಷೆ ನಡೆದವು. ಮೊದಲ ದಿನದ ಪರೀಕ್ಷೆಗೆ ಪೂರೈಕೆ ಮಾಡಿದಂತೆ 2ನೇ ದಿನವೂ ಜಿಲ್ಲಾ ಖಜಾನೆಯಿಂದಲೇ ಆಯಾ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಪ್ರಶ್ನೆಪತ್ರಿಕೆಗಳ ಬಂಡಲ್ಗಳನ್ನು ರವಾನಿಸಲಾಯಿತು. ನಿಗದಿತ ಅವಧಿಗೆ ಸರಿಯಾಗಿ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ಪ್ರಶ್ನೆಪತ್ರಿಕೆಗಳು ತಲುಪಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಾ.11ರಂದು ತರ್ಕಶಾಸ್ತ್ರ, ಶಿಕ್ಷಣ ಮತ್ತು ಸಾಮಾನ್ಯ ಗಣಿತ ವಿಷಯಗಳ ಪರೀಕ್ಷೆ ನಡೆಯಲಿವೆ. ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ಕ್ರಮಕೈಗೊಳ್ಳಲಾಗಿದೆ. ಶುಕ್ರವಾರ ಕೂಡ ಪರೀಕ್ಷಾ ಕೇಂದ್ರಗಳ ಸುತ್ತಲು ಬಂದೋಬಸ್ತ್ ಮಾಡಲಾಗಿದ್ದು,
ಭದ್ರತೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಬ್ಬನೇ ಪರೀಕ್ಷಾರ್ಥಿ ಇಪ್ಪತ್ತು ಸಿಬ್ಬಂದಿ!
ಚನ್ನಗಿರಿ: ಶುಕ್ರವಾರ ನಡೆದ ದ್ವಿತೀಯ ಪಿಯು ಕಂಪ್ಯೂಟರ್ ಸೈನ್ಸ್ ಪರೀಕ್ಷೆಗೆ ಇಡೀ ತಾಲೂಕಿಗೆ ಹಾಜರಾಗಬೇಕಿದ್ದ ಓರ್ವ
ವಿದ್ಯಾರ್ಥಿಯೂ ಪರೀಕ್ಷೆಗೆ ಬಾರದೆ ಸಿಬ್ಬಂದಿ ಆತನಿಗಾಗಿ ಕಾದು ವಾಪಸ್ ತೆರಳಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ
ನಡೆದಿದೆ. ಕೆ.ರಾಘವೇಂದ್ರ ಪರೀಕ್ಷೆಗೆ ಗೈರಾದ ವಿದ್ಯಾರ್ಥಿ. ಈತ ಶುಕ್ರವಾರ ಪಟ್ಟಣದ ಸರ್ಕಾರಿ ಜ್ಯೂನಿಯರ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಕಂಪ್ಯೂಟರ್ ಸೈನ್ಸ್ ಪರೀಕ್ಷೆ ಬರೆಯಬೇಕಿತ್ತು. ಆದರೆ, ಆತ ಪರೀಕ್ಷೆಗೆ ಬಾರದೆ ಇದ್ದುದ್ದರಿಂದ ಮುಖ್ಯ ಅಧೀಕ್ಷಕರು ಸೇರಿ 18 ಸಿಬ್ಬಂದಿ, ಇಬ್ಬರು ಪೊಲೀಸ್ ಪೇದೆಗಳು ಪರೀಕ್ಷಾ ಕೊಠಡಿಯಲ್ಲಿ ಸುಮ್ಮನೆ ಕುಳಿತು ವಾಪಸ್ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ