ಕಂಟೈನ್ಮೆಂಟ್ ಪ್ರದೇಶ ಹಾಗೂ ಕ್ವಾರೆಂಟೈನ್ ಶಾಲೆಗಳ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಬೇಕಿಲ್ಲ
Team Udayavani, Jun 8, 2020, 7:45 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯಾದ್ಯಂತ ಇದೀಗ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶೈಕ್ಷಣಿಕ ವರ್ಷದ ಪೂರ್ವಭಾವಿ ಚಟುವಟಿಕೆಗಳು ಜೂನ್ 5ರಿಂದ ಪ್ರಾರಂಭಗೊಂಡಿವೆ.
ಹಾಗಾಗಿ ಜೂನ್ 5ಕ್ಕೆ ಹಾಗೂ ಕೆಲವೊಂದು ಸೂಚಿತ ಪರಿಸ್ಥಿತಿಯಲ್ಲಿ ಜೂನ್ 8ರಂದು ರಾಜ್ಯದಲ್ಲಿನ ಎಲ್ಲಾ ಶಿಕ್ಷಕರೂ ತಮ್ಮ ತಮ್ಮ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಹಿಂದೆಯೇ ಸುತ್ತೋಲೆಯನ್ನು ಹೊರಡಿಸಿತ್ತು.
ಆದರೆ ಇದೀಗ ಈ ಸುತ್ತೋಲೆಯಲ್ಲಿನ ಅಂಶಗಳಿಗೆ ಕೆಲವೊಂದು ವಿನಾಯಿತಿಗಳನ್ನು ನೀಡಿ ಶಿಕ್ಷಣ ಇಲಾಖೆ ಮರು ಆದೇಶ ಹೊರಡಿಸಿದೆ.
ಇದರ ಪ್ರಕಾರ, ರಾಜ್ಯದಲ್ಲಿ ವಿವಿಧ ಪ್ರದೇಶಗಳನ್ನು ಕೋವಿಡ್ 19 ಸೋಂಕಿನ ಕಾರಣದಿಂದ ಕಂಟೈನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ ಹಾಗೂ ರಾಜ್ಯದಲ್ಲಿನ ಹಲವಾರು ಶಾಲೆಗಳನ್ನು ಕ್ವಾರೆಂಟೈನ್ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ.
ಹಾಗಾಗಿ ಕಂಟೈನ್ಮೆಂಟ್ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಹಾಗೂ ಕ್ವಾರೆಂಟೈನ್ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುತ್ತಿರುವ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗುವುದಕ್ಕೆ ಸಂಬಂಧಿಸಿದಂತೆ ಈ ಕೆಳಕಂಡ ಕ್ರಮಗಳಿಗೆ ಸೂಚಿಸಲಾಗಿದೆ.
1. ಸಂಬಂಧಿಸಿದ ಪ್ರದೇಶವನ್ನು ಕಂಟೈನ್ಮೆಂಟ್ ಪ್ರದೇಶದಿಂದ ಸಡಿಲಗೊಳಿಸುವವರೆಗೆ ಕಂಟೈನ್ಮೆಂಟ್ ಪ್ರದೇಶದ ಅಡಿಯಲ್ಲಿ ಬರುವ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.
2. ಕ್ವಾರೆಂಟೈನ್ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುತ್ತಿರುವ ರಾಜ್ಯದ ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಸಂಬಂಧಿಸಿದ ಶಾಲೆಯನ್ನು ಕ್ವಾರೆಂಟೈನ್ ಕೇಂದ್ರದಿಂದ ಮುಕ್ತಗೊಳಿಸುವವರೆಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.
3. ಕಂಟೈನ್ಮೆಂಟ್ ಪ್ರದೇಶ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಶಿಕ್ಷಕರು ಸಂಬಂಧಿಸಿದ ಪ್ರದೇಶವನ್ನು ಕಂಟೈನ್ಮೆಂಟ್ ಪ್ರದೇಶದಿಂದ ಸಡಿಲಗೊಳಿಸುವವರೆಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.
4. ಬಿಬಿಎಂಪಿ/ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಮೇಲೆ ತಿಳಿಸಿದಂತಹ ಶಾಲೆಗಳನ್ನು ಕಂಟೈನ್ಮೆಂಟ್ ಪ್ರದೇಶ ಹಾಗೂ ಕ್ವಾರೆಂಟೈನ್ ಕೇಂದ್ರದಿಂದ ಮುಕ್ತಗೊಳಿಸಿದ ನಂತರ ಶಾಲೆಗಳ ಪುನರಾರಂಭದ ಕುರಿತು ಈ ಹಿಂದಿನ ಉಲ್ಲೇಖ (1)ರಲ್ಲಿ ತಿಳಿಸಲಾಗಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…