7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ
Team Udayavani, Oct 5, 2019, 3:00 AM IST
ಬೆಂಗಳೂರು: 2019-20ರ ಶೈಕ್ಷಣಿಕ ವರ್ಷದಿಂದಲೇ ಏಳನೆಯ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಸಭಾಂಗಣದಲ್ಲಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ಕುಮಾರ್, ಮಕ್ಕಳಿಗೆ ಪಬ್ಲಿಕ್ ಪರೀಕ್ಷೆಯ ಅನುಭವಕ್ಕಾಗಿ ಈ ಬಾರಿ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಯಾರನ್ನೂ ಫೇಲ್ ಮಾಡುವುದಿಲ್ಲ.
ಆದರೆ, ಮುಂದಿನ ಶೈಕ್ಷಣಿಕ ವರ್ಷದಿಂದ ಪಬ್ಲಿಕ್ ಪರೀಕ್ಷೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ವರ್ಷದ ಪ್ರಾರಂಭದಿಂದಲೇ ಮಕ್ಕಳನ್ನು ತಯಾರು ಮಾಡಲಾಗುವುದು ಎಂದರು. ಮಕ್ಕಳ ಶೈಕ್ಷಣಿಕ ಮತ್ತು ಕಲಿಕಾ ಗುಣಮಟ್ಟ ಕಾಪಾಡುವ ದೃಷ್ಟಿಯಿಂದ ಪಬ್ಲಿಕ್ ಪರೀಕ್ಷೆಯನ್ನು ಮರು ಪರಿಚಯಿಸಲಾಗುತ್ತಿದೆ. 15 ವರ್ಷಗಳಿಂದ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಪಡಿಸಿರುವ ಕಾರಣ, ಕಲಿಕಾ ಗುಣಮಟ್ಟ ಕುಸಿದಿದೆ. ಹೀಗಾಗಿ, ಈ ವರ್ಷದಿಂದಲೇ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸರ್ಕಾರಕ್ಕೆ ಪೋಷಕರು, ಶಿಕ್ಷಕರು ಸಲಹೆ ನೀಡಿದ್ದಾರೆ.
7 ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಎಸ್ಎಸ್ಎಲ್ಸಿ ಬೋರ್ಡ್ ತಯಾರು ಮಾಡಲಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಆಯಾ ಜಿಲ್ಲಾ ಮಟ್ಟದಲ್ಲೇ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದರು. ಮಾರ್ಚ್ ನಲ್ಲಿ ಪಬ್ಲಿಕ್ ಪರೀಕ್ಷೆ ನಡೆಯಲಿದ್ದು, ಪ್ರಶ್ನೆ ಪತ್ರಿಕೆ ಮಾದರಿ ಹೇಗೆ ಇರುತ್ತದೆ ಎಂಬ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇದಕ್ಕಾಗಿ ಸಮಿತಿ ರಚನೆ ಮಾಡಿ ಸಲಹೆ ತೆಗೆದುಕೊಂಡು ನಂತರ ಮಾದರಿ ಪ್ರಶ್ನೆ ಪತ್ರಿಕೆ ಮಾಡಲಾಗುತ್ತದೆ ಎಂದರು.
ಬ್ಯಾಗ್ ರಹಿತ ದಿನ ಜಾರಿಗೆ ಸಿದ್ಧತೆ: ಮಕ್ಕಳಿಗೆ ಕಲಿಕೆ ವಾತಾವರಣ ಮತ್ತಷ್ಟು ವಿದ್ಯಾರ್ಥಿ ಸ್ನೇಹಿಯಾಗಿರಬೇಕು ಎಂಬ ಕಾರಣಕ್ಕೆ ತಿಂಗಳಲ್ಲಿ ಒಂದು ಶನಿವಾರ ಬ್ಯಾಗ್ ರಹಿತ ದಿನವಾಗಿ ಘೋಷಿಸಲು ಸಿದ್ಧತೆ ನಡೆದಿದೆ. ಇದಕ್ಕಾಗಿ ಎನ್ಜಿಒ ಸಂಸ್ಥೆಯೊಂದು ನವೆಂಬರ್ 2ಕ್ಕೆ ಬ್ಯಾಗ್ ರಹಿತ ದಿನ ಹೇಗೆ ಕಲಿಕೆಗೆ ಸಹಾಯಕವಾಗಲಿದೆ ಎಂಬ ಪ್ರಾಯೋಗಿಕ ಪ್ರದರ್ಶನ ತೋರಿಸಲಿದೆ. ನಂತರ ಇದರ ಸಾಧಕ ಬಾಧಕಗಳನ್ನು ಚರ್ಚಿಸಿ ಶೀಘ್ರ ಬ್ಯಾಗ್ ರಹಿತ ದಿನ ಘೋಷಣೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು