Punjab ದಾಳಿ; ಬೆಳಗಾವಿ,ಬಾಗಲಕೋಟೆಯ ಯೋಧರಿಬ್ಬರು ಹುತಾತ್ಮ

ಮುಂದಿನ ತಿಂಗಳು ವಿವಾಹ ಇತ್ತು..

Team Udayavani, Apr 12, 2023, 10:17 PM IST

1-errw

ಸಾಗರ ಅಪ್ಪಾಸಾಹೇಬ, ಸಂತೋಷ ಮಲ್ಲಪ್ಪ ನಾಗರಾಳ

ಬೆಳಗಾವಿ: ಪಂಜಾಬ್ ನ ಬಟಿಂಡಾ ಮಿಲಿಟರಿ ಠಾಣೆಯ ಮೇಲೆ ಬುಧವಾರ ಬೆಳಗ್ಗೆ ನಡೆದ ಅಪರಿಚಿತರ ದಾಳಿಯಲ್ಲಿ ನಿಪ್ಪಾಣಿ ತಾಲೂಕಿನ ಬೇನಾಡಿ ಗ್ರಾಮದ ಯೋಧ ಮತ್ತು ಬಾದಾಮಿ ತಾಲೂಕಿನ ಹನಮನೇರಿಯ ಗ್ರಾಮದ  ಯೋಧ ವೀರಮರಣ ಹೊಂದಿದ್ದಾರೆ.

ಬೇನಾಡಿ ಗ್ರಾಮದ ಸಾಗರ ಅಪ್ಪಾಸಾಹೇಬ ಬನ್ನೆ(25) ಎಂಬ ಯೋಧ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಕುಟಮಬದವರಿಗೆ ಮಾಹಿತಿ ಸಿಗುತ್ತಿದ್ದಂತೆ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ. ಎ. 13ರಂದು ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಲಿದೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ ನಂತರ ಬೀರದೇವ ಮಾಳದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಮೃತಸಾಗರ್ ತಂದೆ ತಾಯಿ ಸಹೋದರ ಹಾಗೂ ಸಹೋದರಿಯನ್ನು ಗಲಿದ್ದಾರೆ. ತಂದೆ ಕುರಿ ಸಾಕಾಣಿಕೆ ಮಾಡುತ್ತಿದ್ದು ಬಡತನದಲ್ಲಿಯೇ ಸಾಗರನನ್ನು ಭಾರತೀಯ ಸೇನೆಗೆ ಸೇರಿಸಿದ್ದರು.

2018ರಲ್ಲಿ ರಾಯಚೂರಿನಲ್ಲಿ ನಡೆದ ಸೈನ್ಯ ಭರ್ತಿಯಲ್ಲಿ ಸೇನೆಗೆ ಸಾಗರ ಆಯ್ಕೆ ಆಗಿದ್ದರು. ಮಹಾರಾಷ್ಟ್ರದ ನಾಸಿಕದಲ್ಲಿ ಒಂದು ವರ್ಷ ತರಬೇತಿ ಮುಗಿಸಿ ಪಂಜಾಬ್ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದನು. ಬೇನಾಡಿ ಗ್ರಾಮದಲ್ಲಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಪೂರೈಸಿ ನಿಪಾಣಿಯ ಪಿಎಸ್ಎಂವಿ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ಪದವಿ ಅವರಿಗೆ ಶಿಕ್ಷಣ ಮುಗಿಸಿದ್ದನು.

ಮುಂದಿನ ತಿಂಗಳು ಸಾಗರನ ವಿವಾಹ ಇತ್ತು

ಸಾಗರ್ ಬನ್ನೆಯ ವಿವಾಹ ಸಮಾರಂಭ ಮೇ 21ರಂದು ನಿಶ್ಚಯವಾಗಿತ್ತು. ಮದುವೆಗಾಗಿ ಎಪ್ರಿಲ್ 18 ಅಥವಾ 20 ರಂದು ಗ್ರಾಮಕ್ಕೆ ಆಗಮಿಸುವವನಿದ್ದರು. ಇಷ್ಟರಲ್ಲಿಯೇ ಗುಂಡಿನ ದಾಳಿಗೆ ವೀರಮರಣ ಹೊಂದಿದ್ದು, ಗ್ರಾಮದಲ್ಲಿ ದುಃಖ ಮಡುಗಟ್ಟಿದೆ.

ಬಾದಾಮಿಯ ಯೋಧ ಹುತಾತ್ಮ

ಬಾದಾಮಿ ತಾಲೂಕಿನ ಹನಮನೇರಿ(ಇನಾಂ) ಗ್ರಾಮದ ಸೈನಿಕ‌ ಸಂತೋಷ ಮಲ್ಲಪ್ಪ ನಾಗರಾಳ (24) ಎನ್ನುವವರಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ‌ ಭಾರತೀಯ ಸೇನೆಯು ಪಂಜಾಬ್ ರೆಜಿಮೆಂಟ್ ನಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಬುಧವಾರ ಅಪರಿಚರು, ಪಂಜಾಬನ ಬಟಿಂಡಾ ಮಿಲಟರಿ‌‌ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಯೋಧ ಸಂತೋಷ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ‌ ಅಸುನೀಗಿದ್ದಾರೆ. ಪಾರ್ಥಿವ ಶರೀರ ಗುರುವಾರ ಗ್ರಾಮಕ್ಕೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಟಿಂಡಾ ಸೇನಾ ಘಟಕದೊಳಗೆ ಬುಧವಾರ ಮುಂಜಾನೆ ಈ ಘಟನೆ ನಡೆದಿರುವುದಾಗಿ ಆರ್ಮಿಯ ಸೌತ್ ವೆಸ್ಟರ್ನ್ ಕಮಾಂಡ್ ಪ್ರಕಟನೆಯಲ್ಲಿ ತಿಳಿಸಿದೆ. ದಾಳಿಯಲ್ಲಿ ನಾಲ್ವರು ಯೋಧರು ಮೃತಪಟ್ಟಿದ್ದು, ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.