ಪ್ರತಿ ಹಳ್ಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ


Team Udayavani, Dec 19, 2018, 8:18 AM IST

2.jpg

ವಿಧಾನಪರಿಷತ್ತು: ರಾಜ್ಯದ ಪ್ರತಿ ಹಳ್ಳಿಗೂ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಲಧಾರೆ ಹೆಸರಿನಡಿಯಲ್ಲಿ ಅಂದಾಜು 60-70 ಸಾವಿರ ಕೋಟಿ ರೂ.ವೆಚ್ಚದಲ್ಲಿ ಯೋಜನೆಯ ರೂಪುರೇಷೆ ತಯಾರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಪ್ರಶ್ನೋತ್ತರ ವೇಳೆ ಬಿಜೆಪಿಯ ತೇಜಸ್ವಿನಿಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಹುತೇಕ ಹಳ್ಳಿಗಳಿಗೆ
ಶುದ್ಧ ಹಾಗೂ ಖಚಿತ ನೀರಿನ ಪೂರೈಕೆ ಇಲ್ಲವಾಗಿದೆ. ಗದಗನಲ್ಲಿ ಎಚ್‌.ಕೆ.ಪಾಟೀಲರು ಕೈಗೊಂಡ ಶುದ್ಧ ಕುಡಿಯುವ ನೀರಿನ ಯೋಜನೆ ಮಾದರಿಯಲ್ಲಿ ಜಲಧಾರೆ ಯೋಜನೆಯಡಿ ಎಲ್ಲ ಹಳ್ಳಿಗಳಿಗೆ ಶುದ್ಧ ಹಾಗೂ ಶಾಶ್ವತ ನೀರು ಪೂರೈಕೆ ಯೋಜನೆ
ಕೈಗೊಳ್ಳಲಾಗುವುದು ಎಂದರು.

ಆಯಾ ಜಿಲ್ಲೆ ಹತ್ತಿರದ ನದಿ ಹಾಗೂ ಜಲಾಶಯಗಳಿಂದ ನೀರು ಪಡೆದು, ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆ ಕೈಗೊಳ್ಳಲಾಗುವುದು. ಸಚಿವ ಸಂಪುಟದ ಸಭೆ ಮುಂದೆ ಈ ಯೋಜನೆಯನ್ನು ತಂದು ತೀರ್ಮಾನ ತೆಗೆದುಕೊಳ್ಳಲಾಗುವುದು. 2018-19ನೇ ಸಾಲಿನಲ್ಲಿ 24,294 ಜನವಸತಿಗಳಿಗೆ ನೀರು ಸರಬರಾಜು ಮಾಡಲು 42,393 ಕಾಮಗಾರಿಗಳನ್ನು ಕೈಗೊಳ್ಳ ಲಾಗಿದ್ದು, 6,135 ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು. 

ನಾಲ್ಕೈದು ವರ್ಷದಿಂದ ಅನುದಾನವಿಲ್ಲ: ಹಳ್ಳಿಗಳಿಗೆ ಉತ್ತಮ ದರ್ಜೆ ರಸ್ತೆಗಳ ನಿರ್ಮಾಣ ಹಾಗೂ ನಿರ್ವಹಣೆ ನಿಟ್ಟಿನಲ್ಲಿ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರಕಾರದ ಪಿಎಂ ಜಿಎಸ್‌ವೈ ಯೋಜನೆ 3ನೇ ಹಂತದಡಿ ರಸ್ತೆ ನಿರ್ಮಾಣ, ದುರಸ್ತಿ ಯೋಜನೆ ಬಗ್ಗೆ ಕೇಂದ್ರ ಸರಕಾರ ಆದೇಶ ಹೊರಡಿಸಬೇಕಾಗಿದೆ. ಕೇಂದ್ರ ಹಾಗೂ ರಾಜ್ಯ ಶೇ.60:40ರ ಅನುಪಾತದಲ್ಲಿ
ಅನುದಾನ ದೊರೆಯಲಿದೆ. ಇದರಿಂದ 8 ಸಾವಿರ ಕಿ.ಮೀ. ರಸ್ತೆ ಅಭಿವೃದ್ಧಿಪಡಿಸಬೇಕಾಗಿದೆ. ನಾಲ್ಕೈದು ವರ್ಷಗಳಿಂದ ಪಿಎಂಜಿಎಸ್‌ವೈ ಅಡಿಯಲ್ಲಿ ಕೇಂದ್ರದಿಂದ ಅನುದಾನ ಬಂದಿಲ್ಲ ಎಂದರು.

ಮಾಸಾಂತ್ಯದೊಳಗೆ ಅನುದಾನ ಹಂಚಿಕೆ
ವಿಧಾನಪರಿಷತ್ತು: ರಾಜ್ಯದಲ್ಲಿ ಕೆರೆಗಳ ಹೂಳೆತ್ತುವ ಹಾಗೂ ಸ್ವತ್ಛತೆ ನಿಟ್ಟಿನಲ್ಲಿ ಈಗಾಗಲೇ 1,211 ಕೋಟಿ ರೂ.ಗಳನ್ನು
ವೆಚ್ಚಮಾಡಲಾಗಿದ್ದು, ಇನ್ನು 1,000 ಕೋಟಿ ರೂ.ಗಳನ್ನು ಮಾರ್ಚ್‌ ಅಂತ್ಯದೊಳಗೆ ವೆಚ್ಚ ಮಾಡಲಾಗುವುದು. ಅದೇರೀತಿ
ಕೆರೆಗಳ ನಿರ್ವಹಣೆ ಕುರಿತು ಸಹಕಾರ ಸಂಘಗಳಿಗೆ ನಿಗದಿ ಪಡಿಸಿದ 8 ಕೋಟಿ ರೂ.ಗಳನ್ನು ಮಾಸಾಂತ್ಯಕ್ಕೆ ಹಂಚಿಕೆ ಮಾಡಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಹೇಳಿದರು.

ಕಾಂಗ್ರೆಸ್‌ ಸದಸ್ಯ ಎಚ್‌.ಎಂ.ರೇವಣ್ಣ ಅವರ ಪಶ್ನೆಗೆ ಉತ್ತರಿಸಿದ ಅವರು, ಬಜೆಟ್‌ನಲ್ಲಿ ಇಲಾಖೆಗೆ ಒದಗಿಸಿ ಹಣವನ್ನು ಪೂರ್ಣಮಟ್ಟದಲ್ಲಿ ಬಳಕೆಗೆ ಕ್ರಮ ಕೈಗೊಳ್ಳಲಾಗಿದೆ. ಕೆರೆ ಸಂಜೀವಿನಿ ಯೋಜನೆ ಅಡಿಯಲ್ಲಿ ಕೆರೆ ಸ್ವಚ್ಛತೆ ಕ್ರಮ ಕೈಗೊಳ್ಳಲಾಗಿದೆ.
2017-18ನೇ ಸಾಲಿನಲ್ಲಿ ಯೋಜನೆ ಅನುಷ್ಠಾನಕ್ಕೆ 35ಕೋಟಿ ರೂ. ವೆಚ್ಚದಲ್ಲಿ 1,294 ಕೆರೆಗಳನ್ನು ಹೂಳೆತ್ತಲು ಉದ್ದೇಶಿಸಲಾಗಿದೆ.
ನವೆಂಬರ್‌ಅಂತ್ಯದವರೆಗೆ 136 ಕೆರೆಗಳಲ್ಲಿ ಪೂರ್ಣಗೊಳಿಸಲಾಗಿದೆ. ಶ್ರೀ ಧರ್ಮಸ್ಥಳ ಕ್ಷೇತ್ರ ಗ್ರಾಮೀಣಾಭಿವೃದ್ಧಿ ಯೋಜನೆ
ಸಹಭಾಗಿತ್ವದಲ್ಲಿ 100 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.