ಲಕ್ಷಾಂತರ ಜನ ಭಾಗಿಯಾಗಿದ್ದ ಪುಷ್ಕರ ನಡೆಸಿದ್ದ್ಯಾರು?


Team Udayavani, Sep 21, 2017, 8:19 AM IST

21STATE-9.jpg

ಮಂಡ್ಯ: ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಜೀವನದಿ ಕಾವೇರಿ ಪುಷ್ಕರಕ್ಕೆ ರಾಜ್ಯ- ಹೊರ ರಾಜ್ಯಗಳಿಂದ ಪ್ರತಿ ದಿನ ಲಕ್ಷಾಂತರ ಜನ ಪುಣ್ಯ ಸ್ನಾನಕ್ಕೆಂದು ಆಗಮಿಸುತ್ತಿದ್ದು, ರಾಜ್ಯ ಸರ್ಕಾರ ಕಿಂಚಿತ್‌ ಸೌಲಭ್ಯದ ವ್ಯವಸ್ಥೆ ಸಹ ಮಾಡಿಲ್ಲ. ಕಾವೇರಿ ಪುಷ್ಕರಕ್ಕೂ ತನಗೂ ಯಾವುದೇ ಸಂಬಂಧವಿಲ್ಲವೆಂದು ಕಣ್ಮುಚ್ಚಿ ಕುಳಿತಿದೆ.

ಕಾವೇರಿ ನದಿಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶ್ರೀರಂಗಪಟ್ಟಣಕ್ಕೆ ಲಕ್ಷಾಂತರ ಜನ ಸೇರುವ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್, ಕಾವೇರಿ ನದಿ ಸ್ನಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಭದ್ರತೆ, ನದಿ ದಡದಲ್ಲಿ ಸ್ನಾನ ಮಾಡುವಾಗ ದುರಂತ ಸಂಭವಿಸದಂತೆ ಮುನ್ನೆಚ್ಚರಿಕೆ ಹಾಗೂ ಒಂದು ವೇಳೆ ಅಪಾಯ ಸಂಭವಿಸಿದರೆ ಭಕ್ತಾದಿಗಳ ರಕ್ಷಣೆಗೆ ಯಾವುದೇ ವ್ಯವಸ್ಥೆಯನ್ನೂ ಜಿಲ್ಲಾಡಳಿತ ಮಾಡಿಲ್ಲ. ದೇಶದ 12 ಪ್ರಮುಖ ನದಿಗಳಲ್ಲಿ ವರ್ಷ ಕ್ಕೊಮ್ಮೆ ನಡೆಯುವ ಪ್ರಸಿದ್ಧ ಪುಷ್ಕರಣೆ ಸಂದರ್ಭ ದಲ್ಲಿ ಸ್ಥಳೀಯ ಸರ್ಕಾರಗಳು ಭಕ್ತಾದಿಗಳಿಗೆ ಸೌಲಭ್ಯ ಕಲ್ಪಿಸಿ ದೇಶದ ಗಮನ ಸೆಳೆದಿವೆ.  ಉತ್ತರ ಪ್ರದೇಶದಲ್ಲಿ ಗಂಗಾನದಿಯ ಪುಷ್ಕರಣೆ ವೇಳೆ ಮಾಜಿ ಮುಖ್ಯಮಂತ್ರಿ ಅಖೀಲೇಶ್‌ ಯಾದವ್‌ ಸರ್ಕಾರದಿಂದಲೇ ಪುಷ್ಕರಣೆ ಏರ್ಪಡಿಸಿ ಮೆಚ್ಚುಗೆಗೆ ಭಾಜನರಾಗಿದ್ದರು.

ಅಪರೂಪಕ್ಕೆ ನಡೆಯುವ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಕಾವೇರಿ ಪುಷ್ಕರವನ್ನು ರಾಜ್ಯ ಸರ್ಕಾರವೇ ವ್ಯವಸ್ಥಿತವಾಗಿ ಸಂಘಟಿಸಿ ದ್ದರೆ, ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು ಕೀರ್ತಿ ಸಂಪಾದಿಸುವ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಮುಜರಾಯಿ ಇಲಾಖೆಯ ಆಯುಕ್ತರು ಪುಷ್ಕರಣೆಯನ್ನು ಖಾಸಗಿ ಸಂಘಟನೆ ಏರ್ಪಡಿಸಿದೆ. ಸ್ಥಳೀಯ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿದೆ. ನಮಗೂ ಅದಕ್ಕೂ ಸಂಬಂಧವಿಲ್ಲ ಎನ್ನುವ ಧೋರಣೆ ತೋರಿದೆ. ಜಿಲ್ಲಾಡಳಿತವು ಪುಷ್ಕರಣೆ ನಮಗೆ ಸಂಬಂಧಿಸಿದ್ದಲ್ಲ. ಮುಜರಾಯಿ
ಇಲಾಖೆ ವ್ಯಾಪ್ತಿಗೆ ಬರುವುದು ಎಂದು ಹೇಳಿ ಕೈ ತೊಳೆದುಕೊಂಡಿದೆ.

ಪುಷ್ಕರ ಹೆಸರಿನಲ್ಲಿ ನಡೆಯುತ್ತಿರುವ ಪಿಂಡ ಪ್ರದಾನ, ಅಸ್ಥಿ , ಕೊಳಕು ಬಟ್ಟೆಗಳು ಹಾಗೂ ಇನ್ನಿತರ ಪೂಜಾ ಸಾಮಗ್ರಿಗಳ ವಿಸರ್ಜನೆಯಿಂದ ಅಕ್ಷರಶಃ ಕಾವೇರಿ ನಲುಗಿಹೋಗಿದ್ದಾಳೆ. ಪುಷ್ಕರದಿಂದ ಕಾವೇರಿ ಕೊಳಕಾಗುತ್ತಿರುವುದಕ್ಕೆ ಹೊಣೆ ಯಾರು ಎನ್ನುವುದಕ್ಕೆ ಉತ್ತರವಿಲ್ಲ. ಎಲ್ಲರಿಂದ ಜಾರಿಕೆ ಉತ್ತರ: ಈ ಮೊದಲು ಅಖೀಲ ಕರ್ನಾಟಕ ಕಮ್ಮವಾರಿ ಸಂಘದವರು ಇದರ ಆಯೋಜಕರೆಂದು ನಂಬಲಾಗಿತ್ತು. ಆದರೆ, ಆ ಸಂಘದವರು ಪುಷ್ಕರ ಮಹೋತ್ಸವ ಆಯೋಜನೆ ನಮ್ಮದಲ್ಲ. ಬಂದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಿದ್ದೇವೆಂದು ಹೇಳುತ್ತಿ ದ್ದಾರೆ. ಜಿಲ್ಲಾಧಿಕಾರಿಯವರು ಮುಜರಾಯಿ ಇಲಾಖೆ ಆಯುಕ್ತರಿಗೆ ಪತ್ರ ಬರೆದು ತಮ್ಮ ಜವಾಬ್ದಾರಿ ಮುಗಿಯಿತೆಂದು ಕುಳಿತಿದ್ದಾರೆ. ಶಾಸಕ ರಮೇಶ್‌ ಬಂಡಿಸಿದ್ದೇಗೌಡರು ನಾವೇನು ಪುಷ್ಕರಕ್ಕೆ ಅನುಮತಿ ಕೊಟ್ಟಿಲ್ಲ. ಅದನ್ನು ನಡೆಸುತ್ತಿ ರುವವರನ್ನೇ ಕೇಳಿ ಎಂದು ಉತ್ತರ ನೀಡಿದ್ದಾರೆ. 

ಪುಷ್ಕರ ನಡೆಸುತ್ತಿರುವುದು ಖಾಸಗಿ ವ್ಯಕ್ತಿಗಳು. ಅವರ ಸಂಪ್ರದಾಯದಂತೆ ಪೂಜೆ ಮಾಡುತ್ತಿದ್ದಾರೆ. ನಾವು ಅದನ್ನು ತಡೆಯಲು ಬರುವುದಿಲ್ಲ. ಅವರು ಖಾಸಗಿಯಾಗಿ ಕಾರ್ಯಕ್ರಮ ಮಾಡಿಕೊಳ್ಳುತ್ತಿರುವುದರಿಂದ ರಾಜ್ಯ ಸರ್ಕಾರದಿಂದ ಯಾವುದೇ ಸಹಾಯ ಕೇಳಿಲ್ಲ. 
●ಷಡಕ್ಷರಿಸ್ವಾಮಿ, ಮುಜರಾಯಿ ಇಲಾಖೆ ಆಯುಕ್ತ

ಪುಷ್ಕರ ರಾಜ್ಯ ಸರ್ಕಾರದ ನೇತೃತ್ವದಲ್ಲಿ ನಡೆಯಬೇಕಿತ್ತು. ಆಂಧ್ರದಲ್ಲಿ ನಡೆದಾಗ ಅಲ್ಲಿನ ಸರ್ಕಾರವೇ ಸಂಪೂರ್ಣ ಜವಾಬ್ದಾರಿ ಹೊತ್ತಿತ್ತು. ಅಚ್ಚುಕಟ್ಟಾಗಿ ಪುಷ್ಕರ ನಡೆದಿತ್ತು. ಆದರೆ, ಇಲ್ಲಿ ಯಾರ ನೇತೃತ್ವ ಎನ್ನುವುದೇ ಅರ್ಥವಾಗುತ್ತಿಲ್ಲ.
●ಗಣೇಶ ಸ್ವರೂಪಾನಂದಗಿರಿ ಸ್ವಾಮೀಜಿ, ಆದಿಶಂಕರ ಮಠ, ಗಂಜಾಂ

ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.