ತೀರ್ಥಯಾತ್ರೆಗೆ ಬಂದಿದ್ದಾತ ಪುಷ್ಕರಿಣಿಯಲ್ಲಿ ಮುಳುಗಿ ಸಾವು
Team Udayavani, Feb 17, 2020, 3:02 AM IST
ಕೋಟ: ತೀರ್ಥಯಾತ್ರೆಗೆ ಆಗಮಿಸಿದ್ದ ಬೆಂಗಳೂರಿನ ಎಂಜಿನಿಯರಿಂಗ್ ಪದವೀಧರ, ಬೆಂಗಳೂರು ಕೆ.ಆರ್. ಪುರಂನ ಬಿದರನಹಳ್ಳಿ ನಿವಾಸಿ ಪವನ್ ಕುಮಾರ್ (23) ಎಂಬುವರು ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಶಂಕರತೀರ್ಥ ಪುಷ್ಕರಿಣಿಯಲ್ಲಿ ಭಾನುವಾರ ಬೆಳಗ್ಗೆ ಮುಳುಗಿ ಮೃತಪಟ್ಟಿದ್ದಾರೆ.
ಈತ ಎಂಜಿನಿಯರಿಂಗ್ ಪದವಿ ಮುಗಿಸಿ ಉದ್ಯೋಗ ಸೇರುವ ಸಿದ್ಧತೆಯಲ್ಲಿದ್ದು, ತಾಯಿ ಹಾಗೂ ಊರಿನ 30 ಮಂದಿಯ ತಂಡದೊಂದಿಗೆ ಫೆ.14ರಂದು ಬೆಂಗಳೂರಿನಿಂದ ಯಾತ್ರೆ ಕೈಗೊಂಡಿದ್ದರು. ದ.ಕ., ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ದೇಗುಲ ಯಾತ್ರೆ ಕೈಗೊಂಡಿದ್ದರು.
ಶನಿವಾರ ರಾತ್ರಿ ಉಡುಪಿಯಲ್ಲಿ ವಾಸ್ತವ್ಯವಿದ್ದು, ಭಾನುವಾರ ಬೆಳಗಿನ ಜಾವ 5.30ಕ್ಕೆ ಸಾಲಿಗ್ರಾಮಕ್ಕೆ ಆಗಮಿಸಿ ಎಲ್ಲರೂ ಜತೆಯಾಗಿ ಪುಷ್ಕರಿಣಿಯಲ್ಲಿ ತೀರ್ಥ ಸ್ನಾನಕ್ಕಾಗಿ ಇಳಿದಿದ್ದರು. ಈ ಸಂದರ್ಭ ಪವನ್ ನೀರಿನಲ್ಲಿ ಸ್ವಲ್ಪ ಮುಂದಕ್ಕೆ ತೆರಳಿದ್ದು, ಕಾಲು ಜಾರಿ ಬಿದ್ದು ಮುಳುಗಿ ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ