ಪುಟ್ಟರಂಗ ಶೆಟ್ಟಿ ರಾಜೀನಾಮೆ ನೀಡಲಿ- ಕೆ.ಬಿ.ಕೋಳಿವಾಡ
Team Udayavani, Jan 6, 2019, 4:13 AM IST
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ಅವರ ಸಿಬ್ಬಂದಿ ಬಳಿ ಭಾರಿ ಪ್ರಮಾಣದ ಹಣ ಪತ್ತೆಯಾದ ಹಿನ್ನಲೆಯಲ್ಲಿ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸ್ಪೀಕರ್ ಕೆ.ಬಿ . ಕೋಳಿವಾಡ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಖಾಸಗಿ ಟೈಪಿಸ್ಟ್ ಆಗಿರುವ ಮೋಹನ್ ಎಂಬಾತನ ಬಳಿ 25.76 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಈ ಹಣ ಸಚಿವ ಪುಟ್ಟರಂಗ ಶೆಟ್ಟಿ ಅವರಿಗೆ ಸೇರಿದ್ದು ಎಂಬ ಮಾತುಗಳು ಕೇಳಿ ಬಂದಿದ್ದು ಈ ಬಗ್ಗೆ ಹಲವರು ಸಚಿವರ ರಾಜೀನಾಮೆ ಗೆ ಒತ್ತಾಯಿಸಿದ್ದರು.
ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಈ ಹಿಂದೆ ಕೆ ಜಾರ್ಜ್ ಅವರ ಮೇಲೆ ಆರೋಪ ಕೇಳಿ ಬಂದಾಗ ರಾಜೀನಾಮೆ ಕೊಟ್ಟಿದ್ದರು. ನಂತರ ಆರೋಪ ಮುಕ್ತವಾದ ನಂತರ ಸಂಪುಟಕ್ಕೆ ಸೇರಿದ್ದರು. ಸಚಿವ ಪುಟ್ಟರಂಗ ಶೆಟ್ಟಿಯು ಹಾಗೆ ಮಾಡಬೇಕು ಎಂದು ಮಾಜಿ ಸ್ಪೀಕರ್ ಅಭಿಪ್ರಾಯ ಪಟ್ಟಿದ್ದಾರೆ.