ಕಾಗದಪತ್ರಗಳ ಸಮಿತಿ ನೋಟಿಸ್ ಪ್ರಶ್ನಿಸಿ ರಿಟ್
Team Udayavani, Jan 17, 2018, 9:40 AM IST
ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ವಾರ್ಷಿಕ ಲೆಕ್ಕಪರಿಶೋಧನಾ ವರದಿ ಸಲ್ಲಿಸಿಲ್ಲವೆಂಬ ಕಾರಣಕ್ಕೆ ವಿಧಾನಮಂಡಲದ ಕಾಗದ ಪತ್ರಗಳ ಸಮಿತಿ ಜಾರಿಗೊಳಿಸಿದ್ದ ನೋಟಿಸ್ ಪ್ರಶ್ನಿಸಿ ಲೋಕಾಯುಕ್ತ ರಿಜಿಸ್ಟ್ರಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸ್ವಾಯತ್ತ ಸಂಸ್ಥೆಯಾದ ಲೋಕಾಯುಕ್ತ ಸಂಸ್ಥೆ ಪ್ರತಿವರ್ಷದ ಆಯವ್ಯಯ ಲೆಕ್ಕಗಳನ್ನು ಕೇಂದ್ರ ಲೆಕ್ಕ ಪರಿಶೋಧನಾ ಸಂಸ್ಥೆ (ಸಿಎಜಿ) ನಡೆಸಿ ವರದಿ ನೀಡುತ್ತದೆ. ಸಿಎಜಿ ವರದಿ ಹಾಗೂ ಸಂಸ್ಥೆಯ ಆಡಳಿತದ ವಾರ್ಷಿಕ ವರದಿಯನ್ನು ಲೋಕಾಯುಕ್ತ ಕಾಯಿದೆ 12(6) ಅನ್ವಯ ಪ್ರತಿವರ್ಷ ರಾಜ್ಯಪಾಲರಿಗೆ ವರದಿ ಕಳುಹಿಸಿಕೊಡಲಾಗುತ್ತದೆ. ನೇರವಾಗಿ ರಾಜ್ಯಸರ್ಕಾರಕ್ಕೆ ಸಲ್ಲಿಸಲು ಅವಕಾಶವಿಲ್ಲ. ಹೀಗಾಗಿ ಕಾಗದ ಪತ್ರಗಳ ಸಮಿತಿ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ನೀಡಿರುವ ನೋಟಿಸ್ ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಈ ಅರ್ಜಿ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಕಳೆದ ಆರು ವರ್ಷಗಳಿಂದ ಲೋಕಾಯುಕ್ತ ಆಯವ್ಯಯ ಲೆಕ್ಕವನ್ನು ಕಾಗದಪತ್ರಗಳ ಸಮಿತಿ ಮುಂದೆ ಮಂಡಿಸಿಲ್ಲ. ಈ ಬಗ್ಗೆ ಸಮಿತಿಯ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ಕೋರಿ ಕಳೆದ ಆಗಸ್ಟ್ನಲ್ಲಿ ಸಮಿತಿ ಅಧ್ಯಕ್ಷ ಶಾಸಕ ಸಾ.ರಾ ಮಹೇಶ್, ಲೋಕಾಯುಕ್ತ ರಿಜಿಸ್ಟ್ರಾರ್ಗೆ ನೋಟಿಸ್ ಜಾರಿಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ