ಪ್ರವಾಸಿ ಗೈಡ್ಗಳಿಗೆ ಶೀಘ್ರ ಗುರುತಿನ ಚೀಟಿ: ಆನಂದ್ ಸಿಂಗ್
Team Udayavani, Oct 27, 2021, 9:22 PM IST
ಬೆಂಗಳೂರು: ರಾಜ್ಯದ ಪಾರಂಪರಿಕ ಹಾಗೂ ಪ್ರವಾಸಿ ತಾಣಗಳಲ್ಲಿರುವ ಪ್ರವಾಸಿ ಗೈಡ್ಗಳಿಗೆ ಕೂಡಲೇ ಗುರುತಿನ ವಿತರಣೆ ಮಾಡುವಂತೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸೂಚನೆ ನೀಡಿದ್ದಾರೆ.
ದಕ್ಷಿಣ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನ ಹಿನ್ನೆಲೆಯಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರವಾಸಿ ಗೈಡ್ಗಳಿಗೆ ಗುರುತಿನ ಚೀಟಿ ವಿತರಣೆಯಾಗದ ಬಗ್ಗೆ ದೂರು ಬಂದಿದ್ದು, ಕೂಡಲೇ ಆ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹಂಪಿಗೆ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಗುರುತಿನ ಚೀಟಿ ಇಲ್ಲದೆ ಅವರು ಪ್ರವಾಸಿಗರನ್ನು ಪರಿಚಯಿಸಿಕೊಂಡು ಕೆಲಸ ಮಾಡುವುದು ಹೇಗೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ರಾಜ್ಯದ ಎಲ್ಲ ಗೈಡ್ಗಳಿಗೂ ಒಂದೇ ರೀತಿಯಾದ ಗುರುತಿನ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಸ್ವಲ್ಪ ತಡವಾಗಿದೆ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದರು. ಇದು ಸಚಿವರಿಗೆ ಸಮಾಧಾನ ತಂದಿಲ್ಲ.
ಇದನ್ನೂ ಓದಿ:ದೀಪಾವಳಿ ದಿನ ದೇವಸ್ಥಾನಗಳಲ್ಲಿ ಗೋಪೂಜೆ : ಜೊಲ್ಲೆಗೆ ಪ್ರಭು ಚೌವ್ಹಾಣ್ ಅಭಿನಂದನೆ
ಗೈಡ್ಗಳಿಗೆ ತರಬೇತಿ ಹಾಗೂ ಸಮವಸ್ತ್ರ ನೀಡುವ ಬಗ್ಗೆಯೂ ಅಧಿಕಾರಿಗಳ ಜತೆ ಸಚಿವರು ಚರ್ಚಿಸಿದರು.
ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕೆಎಸ್ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮ, ಜೆಎಲ್ಆರ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಂಧೂ ಬಿ. ರೂಪೇಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ