ಮೀನುಗಾರಿಕೆ ಕಾಯ್ದೆ ತಿದ್ದುಪಡಿಗೆ ಪೂರಕ : ನಿಯಮಾವಳಿ ಇಲಾಖಾ ಸಭೆಯಲ್ಲಿ ಕೋಟ
Team Udayavani, May 28, 2020, 12:01 AM IST
ಬೆಂಗಳೂರು: ಮೀನುಗಾರಿಕೆ ಇಲಾಖೆಯ ಕಾಯ್ದೆಗೆ 2003ರಲ್ಲಿ ತರಲಾದ ತಿದ್ದುಪಡಿ ಸಂಬಂಧ ಸೂಕ್ತ ನಿಯಮಾವಳಿಗಳನ್ನು 2 ತಿಂಗಳಲ್ಲಿ ರೂಪಿಸಿ ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಬುಧವಾರ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಕುರಿತಂತೆ ಪರಿಣಿತ ರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮೀನುಗಾರರ ಕಲ್ಯಾಣಕ್ಕಾಗಿ 1957ರಲ್ಲಿ ಸ್ಥಾಪನೆ ಯಾದ ಮೀನುಗಾರಿಕೆ ಇಲಾಖೆಗೆ ಪೂರಕವಾಗಿ 1993ರಲ್ಲಿ ಕಾಯ್ದೆ ಜಾರಿಯಾಯಿತು. ಅದಕ್ಕೆ 2003ರಲ್ಲಿ ತರಲಾದ ತಿದ್ದುಪಡಿ ಸಂಬಂಧ ನಿಯಮಾವಳಿ ರೂಪಿಸದಿರುವ ಬಗ್ಗೆ ಸಾಕಷ್ಟು ಚರ್ಚಿಸಲಾಯಿತು. ಬಳಿಕ ತ್ವರಿತವಾಗಿ ನಿಯಮಾವಳಿ ರೂಪಿ ಸಲು ಸೂಚಿಸಲಾಯಿತು ಎಂದು ಹೇಳಿದರು.
ಮೀನುಗಾರಿಕೆಯಲ್ಲಿ ಕರ್ನಾಟಕ ದೇಶದಲ್ಲಿ 9ನೇ ಸ್ಥಾನದಲ್ಲಿದೆ. ಮೀನು ಉತ್ಪಾದನೆ ಹೆಚ್ಚಿಸು ವುದು, ಸುಧಾರಿತ, ತಾಂತ್ರಿಕ ವಿಧಾನಗಳ ವಿಸ್ತರಣೆ, ಹಲವು ಆಯಾಮಗಳಲ್ಲಿ ಮೀನುಗಾರಿಕೆ ಅಭಿವೃದ್ಧಿಗೆ ನೀಲ ನಕ್ಷೆ ಸಿದ್ಧಪಡಿಸಲು ತೀರ್ಮಾನಿಸ ಲಾಯಿತು. ಮರಿಗಳ ಉತ್ಪಾದನೆ, ಕೊಳಗಳ ನಿರ್ಮಾಣವೂ ಒಳಗೊಂಡಂತೆ ಈಗಿರುವ 26,000 ಕೆರೆಗಳ ಪೈಕಿ ಮೀನುಗಾರಿಕೆಗೆ ಸಿದ್ಧವಾದ ಕೆರೆಗಳ ಕುರಿತು ಅಧ್ಯಯನ ವರದಿ ನೀಡುವಂತೆಯೂ ಸೂಚಿಸಲಾಯಿತು ಎಂದು ಸಚಿವರು ತಿಳಿಸಿದರು.
ಒಳನಾಡು ಮೀನುಗಾರಿಕೆಯಲ್ಲಿ ಹೊಸ ತಳಿಗಳ ಸಂಶೋಧನೆ, 2.5 ಲಕ್ಷ ಹೆಕ್ಟೇರ್ ಸವಳು-ಜವಳು ಪ್ರದೇಶದಲ್ಲಿ ಮೀನುಗಾರಿಕೆಗೆ ಅವಕಾಶ, ಮೀನುಗಾರರ ತರಬೇತಿ ಕೇಂದ್ರಗಳಿಗೆ ಕಾಯಕಲ್ಪ, ಪ್ರವಾಸೋದ್ಯಮ ಹಾಗೂ ಕ್ರೀಡಾ ಮೀನುಗಾರಿಕೆ ಅಳವಡಿಕೆ ಬಗ್ಗೆ ವಿಸ್ತೃತ ಚರ್ಚೆಯಾಯಿತು. ರಾಜ್ಯದ ಆಯ್ದ ಕಡೆ ಮೀನುಗಾರಿಕೆ ಕ್ರೀಡೆ ಉತ್ತೇಜಿಸಲು ಗಾಳ ಹಾಕಿ ಮೀನು ಹಿಡಿಯುವ ಪದ್ಧತಿಯನ್ನು ಜನಪ್ರಿಯಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
– ಕೋಟ ಶ್ರೀನಿವಾಸ ಪೂಜಾರಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ