ಅರಣ್ಯ, ಸರಕಾರಿ ಗೋಮಾಳ ಭೂಮಿಯಲ್ಲಿನ ದೇಗುಲ ಜಾಗ ಮಂಜೂರಿಗೆ ಕ್ರಮ: ಸಚಿವ ಆರ್. ಅಶೋಕ್
Team Udayavani, Feb 14, 2023, 7:10 AM IST
ಬೆಂಗಳೂರು: ಸರಕಾರಿ ಭೂಮಿ, ಗೋಮಾಳ, ಅರಣ್ಯ ಪ್ರದೇಶದಲ್ಲಿ ಬಹು ವರ್ಷದಿಂದ ನಿರ್ಮಾಣಗೊಂಡ ದೇವಸ್ಥಾನಗಳು ಜಾಗ ಬಯಸಿ ಕಾನೂನು ಪ್ರಕಾರ ಅರ್ಜಿ ಸಲ್ಲಿಸಿದರೆ ಸಂಪುಟ ಸಭೆಯಲ್ಲಿ ಚರ್ಚಿಸಿ ಆ ದೇವಸ್ಥಾನಕ್ಕೆ ಜಾಗ ಮಂಜೂರು ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಕೆಲವು ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ವೈಯಕ್ತಿಕವಾಗಿ ಮಂಜೂರು ಮಾಡಿಸಿಕೊಳ್ಳುವ ಕೆಲಸ ನಡೆದಿದೆ. ಈ ರೀತಿ ಆಗಬಾರದು ಎಂದರು. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ದೇವಸ್ಥಾನಗಳಿಗೆ ಜಾಗ ಮಂಜೂರು ಮಾಡುವುದಾಗಿ ಹೇಳಿತ್ತು. ಕೆಲವು ಕಡೆಗಳಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಾಫಿ, ಅಡಿಕೆ, ಹೂ ತೋಟ ಮಾಡಿಕೊಂಡಿದ್ದಾರೆ. ಆ ದೇವಸ್ಥಾನಗಳಿಗೆ ಜಾಗ ಮಂಜೂರು ಮಾಡಿಕೊಡುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಅಶೋಕ್, ಅರ್ಜಿ ಸಲ್ಲಿಸಿದರೆ ಜಾಗ ಮಂಜೂರು ಮಾಡುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ