ಪಾದಯಾತ್ರೆ ಬೇಡ, ತೀರ್ಥಯಾತ್ರೆ ಮಾಡಿ; ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ ಸಚಿವ ಅಶೋಕ್
Team Udayavani, Mar 10, 2022, 11:26 AM IST
ಬೆಂಗಳೂರು: ಇಡೀ ದೇಶದಲ್ಲಿ ಕಾಂಗ್ರೆಸ್ ಮೂಲೆ ಗುಂಪಾಗುತ್ತಿದೆ. ರಾಜ್ಯದಲ್ಲಿ ಸಹ ಮೂಲೆ ಗುಂಪಾಗುತ್ತದೆ. ಕಾಂಗ್ರೆಸ್ ನಾಯಕರು ಕೋವಿಡ್, ಟ್ರಾಪಿಕ್ ಜಾಮ್ ಮಾಡುವುದು ಬಿಟ್ಟು ತೀರ್ಥಯಾತ್ರೆ ಮಾಡಲಿ ಎಂದು ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದರು.
ಪಂಚರಾಜ್ಯ ಚುನಾವಣೆ ಮತ ಎಣಿಕೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಫಲಿತಾಂಶ ಹೊರಬೀಳುತ್ತಿದೆ. ಬಿಜೆಪಿ ಮತ್ತೆ ಮತ್ತೆ ಜಯಬೇರಿ ಸಾಧಿಸುತ್ತಿದೆ. ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಹುಮತ ಸಿಗುತ್ತಿದೆ. ಇಡೀ ದೆಶದಲ್ಲಿ ಪಂಜಾಬ್ ನಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರವಿತ್ತು, ಈಗ ಅಲ್ಲೂ ಹೀನಾಯ ಸೋಲು ಕಾಣುತ್ತಿದೆ ಎಂದರು.
ಇದನ್ನೂ ಓದಿ:Uttar Pradesh Election result 2022: ಅಖಿಲೇಶ್ ಸೈಕಲ್ ಗಿಂತ ಯೋಗಿ ಓಟವೇ ಜೋರು
ಈ ಫಲಿತಾಂಶ ಮುಂದಿನ ರಾಜ್ಯದ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಬೇರೆ ರಾಜ್ಯಗಳ ಫಲಿತಾಂಶಗಳು ಯಾವುದೇ ರಾಜ್ಯಕ್ಕಾಗಲಿ ದಿಕ್ಸೂಚಿಯಾಗುತ್ತದೆ. ಇದು ಜನರ ದಿಕ್ಸೂಚಿ. ಹೀಗೆಯೇ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ಕ್ಕೆ ಕರ್ನಾಟಕದಲ್ಲೂ ಬಿಜೆಪಿಗೆ ಬಹುಮತ ಬರುತ್ತದೆ ಎಂದು ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.
ಪಂಜಾಬ್ ನಲ್ಲಿ ಅಬ್ಬರ ಮಾಡಿದರೂ, ಸರ್ಕಸ್ ಮಾಡಿದರೂ ಕಾಂಗ್ರೆಸ್ ಗೆ ಗೆಲ್ಲಲಾಗಲಿಲ್ಲ. ಬಿಜೆಪಿ ಅಲೆ ಶುರುವಾಗಿದೆ. ನಮ್ಮ ದೃಷ್ಟಿ ಸದ್ಯ ಮುಂದಿನ ಚುನಾವಣೆ ಗೆಲ್ಲುವುದು. ಈ ಫಲಿತಾಂಶ ಬಿಜೆಪಿಗೆ ಸಂತೋಷ ತಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು