ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ
Team Udayavani, May 17, 2022, 3:12 PM IST
ಬೆಂಗಳೂರು: ರಾಜಕೀಯ ಬೆಳವಣಿಗೆಯಲ್ಲಿ ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಿಸಲಾಗಿದೆ. ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾಗಲಿರುವ ಕಾರಣದಿಂದ ರಾಜೀನಾಮೆ ನೀಡಿದ್ದರು.
ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರು ಇಂದು ಸಂಜೆ ವಿಧಾನಸೌಧದ ಕೊಠಡಿ ಸಂಖ್ಯೆ 117 ರಲ್ಲಿ ಅಧಿಕಾರ ಸ್ವೀಕರಿಸಿದರು.
ಇದನ್ನೂ ಓದಿ:ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ತಾಂತ್ರಿಕ ಅಡ್ಡಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಹಂಗಾಮಿ ಸಭಾಪತಿ ನೇಮಕಕ್ಕೆ ಬಿಜೆಪಿ ನಿರ್ಧರಿಸಿದೆ. ಹಂಗಾಮಿ ಸಭಾಪತಿ ನೇಮಕ ಸಂಬಂಧ ಸೋಮವಾರ ಸಂಜೆ ರಾಜ್ಯಪಾಲರ ಜೊತೆ ಮಾತುಕತೆ ನಡೆಸಲಾಗಿತ್ತು. ಇಂದು ಈ ಬಗ್ಗೆ ಮುಖ್ಯಮಂತ್ರಿಗಳು ಶಿಫಾರಸ್ಸು ಕಳುಹಿಸಿದ್ದು, ರಾಜ್ಯಪಾಲರು ಅನುಮೋದಿಸಿದ್ದಾರೆ.
ಏನಿದು ತಾಂತ್ರಿಕ ಅಡ್ಡಿ: ಮೇಲ್ಮೆನೆ ಸದಸ್ಯರು ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ಸಭಾಪತಿ ಅಥವಾ ಉಪ ಸಭಾಪತಿಗೆ ಸಲ್ಲಿಸಬೇಕು. ಆದರೆ ಹೊರಟ್ಟಿಯವರೇ ಸಭಾಪತಿಯಾದ ಕಾರಣ ಸಭಾಪತಿಗೆ ರಾಜೀನಾಮೆ ನೀಡಲು ಆಗುವುದಿಲ್ಲ. ಉಪ ಸಭಾಪತಿ ಸ್ಥಾನ ಖಾಲಿಯಿದೆ. ಹೀಗಾಗಿ ಹೊರಟ್ಟಿ ಬಿಜೆಪಿ ಸೇರ್ಪಡೆ ತಡವಾಗುತ್ತಿದೆ.
ಹಂಗಾಮಿ ಸಭಾಪತಿ ನೇಮಕದ ಬಳಿಕ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕಾರವಾಗಲಿದ್ದು, ಬಳಿಕ ಇಂದು ಸಂಜೆ ಅಥವಾ ನಾಳೆ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ