ರಾಜ್ಯ ನಾಯಕರಿಂದ ‘ಮಾಸ್ಟರ್‌ ಪ್ಲ್ಯಾನ್‌’ ಕೇಳಿದ ರಾಹುಲ್‌


Team Udayavani, Mar 31, 2022, 10:03 AM IST

rahul

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯ ನಾಯಕರು ರೂಪಿಸಿರುವ ಮಾಸ್ಟರ್‌ ಪ್ಲ್ರಾನ್‌ ಏನು ಎಂಬ ಬಗ್ಗೆ ರಾಹುಲ್‌ಗಾಂಧಿ ಮಾಹಿತಿ ಪಡೆಯಲಿದ್ದಾರೆ.

ರಾಹುಲ್‌ ರಾಜ್ಯ ಪ್ರವಾಸ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಕುರಿತು ಪ್ರತ್ಯೇಕವಾಗಿ ವಿವರ ಪಡೆಯಲಿದ್ದು, ನಂತರ ರಾಜ್ಯದ 224 ಕ್ಷೇತ್ರಗಳಲ್ಲೂ ಆಂತರಿಕ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಪಂಚರಾಜ್ಯ ಫ‌ಲಿತಾಂಶ ನಂತರ ಕಳವಳಗೊಂಡಿರುವ ರಾಹುಲ್‌ ಗಾಂಧಿ ಕರ್ನಾಟಕದ ವಿಧಾನಸಬೆ ಚುನಾವಣೆ ಮೇಲೆ ಹೆಚ್ಚು ಒತ್ತು ನೀಡಲು ವಿಶೇಷ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ಕಾರಣಕ್ಕೆ ಶಾಸಕರು, ಸಂಸದರು, ಕಳೆದ ಚುನಾವಣೆಯಲ್ಲಿ ಪರಾಜಿತರಾದ ಅಭ್ಯರ್ಥಿಗಳ ಜತೆಯೂ ಸಂವಾದ ನಡೆಸಲು ತೀರ್ಮಾ ನಿಸಿದ್ದು ಆಯಾ ಕ್ಷೇತ್ರದ ಸ್ಥಿತಿಗತಿ ಬಗ್ಗೆಯೂ ಮಾಹಿತಿ ಪಡೆಯಲಿದ್ದಾರೆ. ಅದರ ಆಧಾರದ ಮೇಲೆ ರಾಜ್ಯ ನಾಯಕರ ಜತೆ ಚರ್ಚಿಸಿ ರಣತಂತ್ರ ರೂಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮೇ ನಂತರ ರಾಜ್ಯಪ್ರವಾಸಕ್ಕೂ ರೂಪುರೇಷೆ ನಿಗದಿಯಾಗಲಿದೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿನ ಇತ್ತೀಚಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಪಕ್ಷದ ಮೇಲೆ ಉಂಟಾಗಬಹುದಾದ ಪರಿಣಾಮ, ನಾಯಕರ ಹೇಳಿಕೆಯಿಂದ ಆಗಬಹುದಾದ ರಾಜಕೀಯ ಲಾಭ-ನಷ್ಟದ ಕುರಿತು ಚರ್ಚಿಸಲು ರಾಜ್ಯ ಮುಖಂಡರನ್ನು ದೆಹಲಿಗೆ ಕರೆಸಿಕೊಂಡು ಚರ್ಚಿಸಲು ರಾಹುಲ್‌ ನಿರ್ಧರಿಸಿದ್ದರಾದರೂ ಶಾಸಕರು-ಮಾಜಿ ಶಾಸಕರ ಜತೆ ಮುಖಾಮುಖೀ ಸಂವಾದ ನಡೆಸಿದರೆ ವಾಸ್ತವಾಂಶ ತಿಳಿಯುತ್ತದೆ ಎಂದು ಹಿರಿಯ ನಾಯಕರು ಹೇಳಿದ್ದರಿಂದ ಬೆಂಗಳೂರಿಗೆ ಬಂದು ಸಭೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ದೂರು-ದುಮ್ಮಾನ: ಈ ಮಧ್ಯೆ, ಬಿಜೆಪಿಯನ್ನು ಎದುರಿಸುವ ವಿಚಾರದಲ್ಲಿ ರಾಜ್ಯ ನಾಯಕರು ಒಗ್ಗಟ್ಟು ಪ್ರದರ್ಶಿಸುತ್ತಿಲ್ಲ ಎಂದು ರಾಹುಲ್‌ಗೆ ದೂರುಪಟ್ಟಿ ಸಲ್ಲಿಸಲು ಹಿರಿಯ ನಾಯಕರು ಸಜ್ಜಾಗಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಬಣ ರಾಜಕೀಯ ಹಾಗೂ ಕೆಲವು ವಿಚಾರ ಹಾಗೂ ಸಂದರ್ಭಗಳಲ್ಲಿ ನಾನೊಂದು ತೀರ ನೀನೊಂದು ತೀರ ಎಂಬ ವರ್ತನೆಯಿಂದ ಇತರೆ ನಾಯಕರು ಇಕ್ಕಟ್ಟಿಗೆ ಸಿಲುಕುವಂತಾಗಿದೆ. ಪ್ರಮುಖ ವಿಚಾರಗಳ ಚರ್ಚೆಗೆ ಸಮನ್ವಯ ಸಮಿತಿ ರಚನೆ ಮಾಡುವುದು ಸೂಕ್ತ ಎಂಬುದು ಹಿರಿಯ ನಾಯಕ ವಾದ ಎಂದು ಹೇಳಲಾಗಿದೆ.

ಇದನ್ನೂ ಓದಿ:ಕೇಜ್ರಿವಾಲ್ ರನ್ನು ಸೋಲಿಸಲು ಅಸಾಧ್ಯ, ಅದಕ್ಕೆ ಬಿಜೆಪಿ ಕೊಲ್ಲಲು ಬಯಸುತ್ತಿದೆ: ಸಿಸೋಡಿಯಾ

ಆದರೆ, ಕೆಪಿಸಿಸಿ ಅಧ್ಯಕ್ಷರು, ಉಭಯ ಸದನಗಳ ಪ್ರತಿಪಕ್ಷ ನಾಯಕರು, ಪ್ರಚಾರ ಸಮಿತಿ ಆಧ್ಯಕ್ಷರು, ಕಾರ್ಯಾಧ್ಯಕ್ಷರು ಇರುವಾಗ ಮತ್ತೆ ಸಮನ್ವಯ ಸಮಿತಿ ಅಗತ್ಯವಿಲ್ಲ. ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌.ಮುನಿಯಪ್ಪ, ರೆಹಮಾನ್‌ ಖಾನ್‌ ಅವರ ಸಲಹೆ-ಸೂಚನೆ ಪಡೆಯಲಾಗುತ್ತಿದೆ. ಮತ್ತೂಂದು ಸಮನ್ವಯ ಸಮಿತಿ ಯಾಕೆ ಎಂಬುದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರ ವಾದ ಎಂದು ತಿಳಿದು ಬಂದಿದೆ.

ಪಟ್ಟಿ ಬಿಡುಗಡೆ “ಭಾಗ್ಯ”: ರಾಹುಲ್‌ ಗಾಂಧಿ ಅವರ ರಾಜ್ಯ ಪ್ರವಾಸದ ನಂತರ ಏಪ್ರಿಲ್‌ ಮೊದಲ ವಾರದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಗೆ ಬಿಡುಗಡೆ ಭಾಗ್ಯ ದೊರೆಯಲಿದೆ. ಸುಮಾರು 180 ರಿಂದ 200 ಪದಾಧಿಕಾರಿಗಳ ನೇಮಕಕ್ಕೆ ಹೈಕಮಾಂಡ್‌ ಒಪ್ಪಿಗೆ ಪಡೆಯಲಾಗಿದ್ದು, ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರು ನೀಡಿದ್ದ ಪಟ್ಟಿಯ ಆಧಾರದಲ್ಲಿ ಕೆ.ಸಿ.ವೇಣು ಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ ಅಂತಿಮ ಪಟ್ಟಿ ಸಿದ್ಧಪಡಿಸಿ ಇತ್ತೀಚೆಗೆ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿದ್ದಾಗ ರಾಹುಲ್‌ ಗಾಂಧಿಯವರ ಗಮನಕ್ಕೆ ತಂದು ಒಪ್ಪಿಗೆ ಪಡೆದುಕೊಂಡಿದ್ದಾರೆ. ಯುಗಾದಿ ನಂತರ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.