ದೇಶದ ವೈಮಾನಿಕ ಕ್ಷೇತ್ರಕ್ಕೆ ಎಚ್ ಎಎಲ್ ಕೊಡುಗೆ ಅಪಾರ: ರಾಹುಲ್ ಸಂವಾದ
Team Udayavani, Oct 13, 2018, 5:18 PM IST
ಬೆಂಗಳೂರು: ಎಚ್ ಎಎಲ್ ಕೇವಲ ಕಂಪನಿ ಮಾತ್ರವಲ್ಲ. ಇದು ದೇಶದ ಶಕ್ತಿ. ಇಲ್ಲಿಗೆ ಬಂದು ಮಾತನಾಡುವುದು ನನಗೆ ಹೆಮ್ಮೆಯ ವಿಷಯವಾಗಿದೆ. ದೇಶದ ವೈಮಾನಿಕ ಕ್ಷೇತ್ರದಲ್ಲಿ ಎಚ್ ಎಎಲ್ ಕೊಡುಗೆ ಅಪಾರವಾದುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.
ಶನಿವಾರ ಬೆಂಗಳೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿ, ನಗರದ ಮಿನ್ಸ್ಕ್ ಸ್ಕ್ವೇರ್ ಬಳಿ ಎಚ್ ಎಎಲ್ ನಿವೃತ್ತ ನೌಕರರ ಜೊತೆ ಸಂವಾದ ನಡೆಸಿದರು. ಸಂವಾದಕ್ಕೂ ಮುನ್ನ ಮಾತನಾಡಿದ ಅವರು, ದೇಶಕ್ಕೆ ಎಚ್ ಎಎಲ್ ಬಹುದೊಡ್ಡ ಕೊಡುಗೆ ಎಂದು ಶ್ಲಾಘಿಸಿದರು.
ಎಚ್ ಎಎಲ್ ಒಂದು ಸಾಮಾನ್ಯ ಕಂಪನಿಯಲ್ಲ. ಎಚ್ ಎಎಲ್ ಸಾಮರ್ಥ್ಯದ ಬಗ್ಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಮಾಮಾ ಕೂಡಾ ಶ್ಲಾಘಿಸಿದ್ದರು ಎಂದು ಹೇಳಿದರು. ಆದರೆ ಕೇಂದ್ರ ಸರ್ಕಾರ ಮಾತ್ರ ಎಚ್ ಎಎಲ್ ಗೆ ಯುದ್ಧ ವಿಮಾನ ತಯಾರಿಸುವ ಸಾಮರ್ಥ್ಯ ಇಲ್ಲ ಎಂದೇ ಪ್ರತಿಪಾದಿಸುತ್ತಿದೆ ಎಂದು ದೂರಿದರು.
ಬೆಂಗಳೂರಿನ ಎಚ್ ಎಎಲ್ ಗೆ ರಫೇಲ್ ಯುದ್ಧ ವಿಮಾನ ತಯಾರಿಸುವ ಸಾಮರ್ಥ್ಯ ಇಲ್ಲ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿರುವುದರಿಂದ ಸರ್ಕಾರಿ ಸ್ವಾಮ್ಯದ ಎಚ್ ಎಎಲ್ ಗೆ ಕೇಂದ್ರ ಸರಕಾರ ಅವಮಾನ ಮಾಡಿದ್ದು, ಈ ವಿಷಯದ ಕುರಿತು ರಾಹುಲ್ ಎಚ್ ಎಎಲ್ ನಿವೃತ್ತ ನೌಕರರ ಜೊತೆ ಸಂವಾದ ನಡೆಸಿದರು.
ಎಚ್ ಎಎಲ್ ಗೆ ಯುದ್ಧ ವಿಮಾನ ತಯಾರಿಸುವ ಶಕ್ತಿ ಇಲ್ಲವೇ? ದೇಶಕ್ಕೆ ಎಚ್ ಎಎಲ್ ಕೊಡುಗೆ ಎಷ್ಟಿದೆ ಎಂಬಿತ್ಯಾದಿ ಹಲವಾರು ವಿಷಯಗಳ ಕುರಿತು ರಾಹುಲ್ ಗಾಂಧಿ ನಿವೃತ್ತ ನೌಕರರ ಜೊತೆ ಸಂವಾದ ನಡೆಸುವ ಮೂಲಕ ಮಾಹಿತಿ ಪಡೆದರು.
ಚಿತ್ರ, ವಿಡಿಯೋ; ಫಕ್ರುದ್ದೀನ್ ಎಚ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ