ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ; 5 ರೂ.ಗೆ ತಿಂಡಿ, 10 ರೂ.ಗೆ ಊಟ
Team Udayavani, Aug 16, 2017, 12:08 PM IST
ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನಾದ್ಯಂತ ಆರಂಭಿಸಿರುವ 101 ಇಂದಿರಾ ಕ್ಯಾಂಟೀನ್ ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಜಯನಗರದಲ್ಲಿನ ಕನಕನಪಾಳ್ಯದಲ್ಲಿ ನಿರ್ಮಾಣವಾಗಿದ್ದ ಇಂದಿರಾ ಕ್ಯಾಂಟೀನ್ ಅನ್ನು ಸಾಂಕೇತಿಕವಾಗಿ ರಾಹುಲ್ ಗಾಂಧಿ ಉದ್ಘಾಟಿಸಿದರು. ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್, ಸಂಸದ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್, ಕೆಜೆ ಜಾರ್ಜ್, ಮೇಯರ್ ಪದ್ಮಾವತಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ. ಇಂದಿರಾ ಕ್ಯಾಂಟೀನ್ ನಲ್ಲಿ 5 ರೂಪಾಯಿಗೆ ತಿಂಡಿ, 10 ರೂಪಾಯಿಗೆ ಊಟ ಲಭ್ಯವಾಗಲಿದೆ. ಬೆಂಗಳೂರಿನಾದ್ಯಂತ ಸುಮಾರು 70 ದಿನಗಳಲ್ಲಿ 101 ಇಂದಿರಾ ಕ್ಯಾಂಟೀನ್ ಅನ್ನು ನಿರ್ಮಿಸಲಾಗಿತ್ತು.
ಯಾರೂ ಉಪವಾಸದಿಂದ ಮಲಗಬಾರದು: ರಾಹುಲ್ ಗಾಂಧಿ
ದೇಶದಲ್ಲಿ ಎಲ್ಲರಿಗೂ ಊಟ, ತಿಂಡಿ ಸಿಗಬೇಕು. ಇದು ದೇಶದ ಜನರ ಪ್ರತಿಯೊಬ್ಬರ ಹಕ್ಕು. ಯಾರೂ ಉಪವಾಸದಿಂದ ಮಲಗಬಾರದು. ಬೆಂಗಳೂರಿನ ಯಾವುದೇ ಬಡ ವ್ಯಕ್ತಿ ಹಸಿದ ಹೊಟ್ಟೆಯಲ್ಲಿ ಇರಬಾರದು. ಹಾಗಾಗಿ ಇಂದಿರಾ ಕ್ಯಾಂಟೀನ್ ಮೂಲಕ ಹಸಿದವರ ಹೊಟ್ಟೆ ತಂಬಿಸುವ ಕನಸನ್ನು ನನಸು ಮಾಡುವ ಪ್ರಯತ್ನ ಬೆಂಗಳೂರಿನಲ್ಲಿ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಹೈಲೈಟ್ಸ್:
ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿಗೆ ಹೂ ಗುಚ್ಛ ನೀಡಿ ವೇದಿಕೆಗೆ ಸ್ವಾಗತಿಸಿದ ಸಚಿವ ಕೆಜೆ ಜಾರ್ಜ್
ಜೆಡಿಎಸ್, ಬಿಜೆಪಿ ಮುಖಂಡರು, ಕಾರ್ಪೋರೇಟರ್ ಗಳು ಕಾರ್ಯಕ್ರಮಕ್ಕೆ ಗೈರು
5 ರೂಪಾಯಿಗೆ ತಿಂಡಿ, 10 ರೂಪಾಯಿಗೆ ಊಟ
ನಿಂತುಕೊಂಡು ಆಹಾರ ಸೇವಿಸಲು 8 ಮೇಜುಗಳು
ನಗರದ ಇತರೆಡೆಯೂ ಇಂದಿರಾ ಕ್ಯಾಂಟೀನ್ ತೆರೆಯಲಾಗುವುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ