21 ದಿನ ಕರ್ನಾಟಕದಲ್ಲೆ ಉಳಿದುಕೊಳ್ಳಲಿರುವ ರಾಹುಲ್ ಗಾಂಧಿ
''ಭಾರತ್ ಜೋಡೊ ಯಾತ್ರೆ" ದೇಶವೇ ಗಮನಿವಷ್ಟರ ಮಟ್ಟಿಗೆ ಯಶಸ್ವಿಗೊಳಿಸಬೇಕು
Team Udayavani, Aug 20, 2022, 2:13 PM IST
ಬೆಂಗಳೂರು: “ಭಾರತ್ ಜೋಡೊ ಯಾತ್ರೆ” ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು 21 ದಿನ ಕರ್ನಾಟಕದಲ್ಲೆ ಇರಲಿದ್ದು “ಭಾರತ್ ಜೋಡೊ ಯಾತ್ರೆ” ದೇಶವೇ ಗಮನಿವಷ್ಟರ ಮಟ್ಟಿಗೆ ಯಶಸ್ವಿಗೊಳಿಸಬೇಕು ಎಂದು ಕಾರ್ಯಕರ್ತರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಶನಿವಾರ, ಕೆಪಿಸಿಸಿ ಹಿಂದುಳಿದ ವಿಭಾಗ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈಗಾಲೇ ಸ್ವತಂತ್ರ ನಡಿಗೆಯಲ್ಲಿ ಹೆಜ್ಜೆ ಹಾಕಿ ದೊಡ್ಡ ಮಟ್ಟದ ಯಶಸ್ಸು ತಂದಿದ್ದೀರಿ.ಅದೇ ರೀತಿಯಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಕಾರ್ಯಕ್ರಮ ಇಡೀ ದೇಶ ಕರ್ನಾಟಕದ ಕಡೆಗೆ ನೋಡುವಂತೆ ಮಾಡಿ ಎಂದು ಮನವಿ ಮಾಡಿದರು.
ಭಾರತ ಜೋಡೋ ಯಾತ್ರೆ ರಾಜ್ಯದುದ್ದಕ್ಕೂ ನಡೆಯಲಿದೆ. ಆಯಾ ಜಿಲ್ಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಜ್ಜೆ ಹಾಕಬೇಕು.ಈ ಸಂಬಂಧ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾ ಮುಖಂಡರ ಜತೆ ಮಾತನಾಡಿರುವುದಾಗಿ ಹೇಳಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜಾಹೀರಾತಿನಲ್ಲಿ ನೆಹರೂ ಫೋಟೋ ಕೈಬಿಟ್ಟು ಆರ್ ಎಸ್ ಎಸ್ ಮುಖಂಡರನ್ನು ಓಲೈಕೆ ಮಾಡುವ ಕೆಲಸಕ್ಕೆ ಕೈ ಹಾಕಿದರು. ಇತಿಹಾಸದ ಚರಿತ್ರೆ ತಿರುಚಿಸುವ ಕೆಲಸ ಮಾಡಿದರು. ಆದರೆ ಈ ದೇಶದ ಇತಿಹಾಸ ತಿರುಚಲು ಯಾರಿಂದ ಸಾಧ್ಯವಿಲ್ಲ. ಜನರು ದೇಶದ ಇತಿಹಾಸ ಓದಿಕೊಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ