ರಾಯಚೂರು: ವೈಟಿಪಿಎಸ್ನಲ್ಲಿ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು
Team Udayavani, May 15, 2022, 6:12 PM IST
ರಾಯಚೂರು: ಸಮೀಪದ ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಸಿಎಚ್ಪಿ ಸ್ಟಾಕ್ ವಿಭಾಗದಲ್ಲಿ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ರವಿವಾರ ನಡೆದಿದೆ.
ತಾಲೂಕಿನ ಚಿಕ್ಕಸುಗೂರು ಗ್ರಾಮದ ಉಸ್ಮಾನ್ ಅಲಿ (38) ಮೃತ ದುರ್ದೈವಿ ಕಾರ್ಮಿಕ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಮದುವೆ ನಿಶ್ಚಯದ ಬಳಿಕ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಿಯಕರ; ಮನನೊಂದು ಪ್ರಿಯತಮೆ ಆತ್ಮಹತ್ಯೆ
ಕಲ್ಲಿದ್ದಿಲು ಸಾಗಿಸುವ ಬೆಲ್ಟ್ ಗೆ ತಲೆ ಸಿಲುಕಿಕೊಂಡಿದ್ದು, ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರದ ಅಧಿಕಾರಿಗಳು ಕೂಡಲೇ ಕೆಲಸ ಸ್ಥಗಿತಗೊಳಿಸಿ ಶವವನ್ನು ಹೊರ ತೆಗೆದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.